<p><strong>ಬೆಂಗಳೂರು:</strong> ಜ್ಯೋತಿ ಸಂಜೀವಿನಿ ಆರೋಗ್ಯ ಸುರಕ್ಷಾ ಯೋಜನೆಯನ್ನು ನಗರ ಸ್ಥಳೀಯ ಸಂಸ್ಥೆಗಳ ನೌಕರರಿಗೂ ವಿಸ್ತರಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಪೌರಾಡಳಿತ ಸಚಿವ ಕೆ.ಸಿ. ನಾರಾಯಣ ಗೌಡ ಸೂಚಿಸಿದ್ದಾರೆ.</p>.<p>ಈ ಬಗ್ಗೆ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಪದಾಧಿಕಾರಿಗಳು ಮತ್ತು ಇಲಾಖೆ ಅಧಿಕಾರಿಗಳ ಜೊತೆ ಸಚಿವರು ಶನಿವಾರ ಸಭೆ ನಡೆಸಿದರು.</p>.<p>ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ವಿಮೆ ಯೋಜನೆ (ಕೆಜಿಐಡಿ) ಮತ್ತು ಭವಿಷ್ಯ ನಿಧಿ (ಜಿಪಿಎಫ್) ಸೌಲಭ್ಯ ಒದಗಿಸಲು ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಕ್ಕೆ ಸಂಬಂಧಿಸಿ 15 ದಿನಗಳ ಒಳಗೆ ವರದಿ ನೀಡುವಂತೆಯೂ ಇಲಾಖೆಯ ನಿರ್ದೇಶಕರಿಗೆ ಸಚಿವರು ಸೂಚಿಸಿದರು.</p>.<p>2017ರ ಹಿಂದಿನ ಅರ್ಹತೆಗೆ ಅನುಗುಣವಾಗಿ ನೌಕರರನ್ನು ಕಾಯಂಗೊಳಿಸಬೇಕು ಅಥವಾ ‘ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ನಿಯಮ’ಕ್ಕೆ ತಿದ್ದುಪಡಿ ತಂದು ಆರ್ಥಿಕ ಇಲಾಖೆ ಅಭಿಪ್ರಾಯ ಪಡೆದು ಒಂದು ತಿಂಗಳ ಒಳಗಾಗಿ ಕರಡು ನಿಯಮ ರಚಿಸಬೇಕು. ಪೌರಕಾರ್ಮಿಕರ ದಿನಾ ಚರಣೆ ಅಂಗವಾಗಿ ₹ 3,500 ವಿಶೇಷ ಭತ್ಯೆ ನೀಡುತ್ತಿದ್ದು, ಅದನ್ನು ₹ 7 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಹೇಳಿದರು.</p>.<p>ಪೌರಸೇವಾ ವೃಂದದ ನೌಕರರು ಸೇವೆಯಲ್ಲಿರುವಾಗ ಮೃತಪಟ್ಟರೆ ಶವ ಸಂಸ್ಕಾರಕ್ಕೆ ನೀಡುತ್ತಿರುವ ₹ 7,500 ಸಹಾಯಧನವನ್ನು ದ್ವಿಗುಣಗೊಳಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜ್ಯೋತಿ ಸಂಜೀವಿನಿ ಆರೋಗ್ಯ ಸುರಕ್ಷಾ ಯೋಜನೆಯನ್ನು ನಗರ ಸ್ಥಳೀಯ ಸಂಸ್ಥೆಗಳ ನೌಕರರಿಗೂ ವಿಸ್ತರಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಪೌರಾಡಳಿತ ಸಚಿವ ಕೆ.ಸಿ. ನಾರಾಯಣ ಗೌಡ ಸೂಚಿಸಿದ್ದಾರೆ.</p>.<p>ಈ ಬಗ್ಗೆ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಪದಾಧಿಕಾರಿಗಳು ಮತ್ತು ಇಲಾಖೆ ಅಧಿಕಾರಿಗಳ ಜೊತೆ ಸಚಿವರು ಶನಿವಾರ ಸಭೆ ನಡೆಸಿದರು.</p>.<p>ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ವಿಮೆ ಯೋಜನೆ (ಕೆಜಿಐಡಿ) ಮತ್ತು ಭವಿಷ್ಯ ನಿಧಿ (ಜಿಪಿಎಫ್) ಸೌಲಭ್ಯ ಒದಗಿಸಲು ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಕ್ಕೆ ಸಂಬಂಧಿಸಿ 15 ದಿನಗಳ ಒಳಗೆ ವರದಿ ನೀಡುವಂತೆಯೂ ಇಲಾಖೆಯ ನಿರ್ದೇಶಕರಿಗೆ ಸಚಿವರು ಸೂಚಿಸಿದರು.</p>.<p>2017ರ ಹಿಂದಿನ ಅರ್ಹತೆಗೆ ಅನುಗುಣವಾಗಿ ನೌಕರರನ್ನು ಕಾಯಂಗೊಳಿಸಬೇಕು ಅಥವಾ ‘ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ನಿಯಮ’ಕ್ಕೆ ತಿದ್ದುಪಡಿ ತಂದು ಆರ್ಥಿಕ ಇಲಾಖೆ ಅಭಿಪ್ರಾಯ ಪಡೆದು ಒಂದು ತಿಂಗಳ ಒಳಗಾಗಿ ಕರಡು ನಿಯಮ ರಚಿಸಬೇಕು. ಪೌರಕಾರ್ಮಿಕರ ದಿನಾ ಚರಣೆ ಅಂಗವಾಗಿ ₹ 3,500 ವಿಶೇಷ ಭತ್ಯೆ ನೀಡುತ್ತಿದ್ದು, ಅದನ್ನು ₹ 7 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಹೇಳಿದರು.</p>.<p>ಪೌರಸೇವಾ ವೃಂದದ ನೌಕರರು ಸೇವೆಯಲ್ಲಿರುವಾಗ ಮೃತಪಟ್ಟರೆ ಶವ ಸಂಸ್ಕಾರಕ್ಕೆ ನೀಡುತ್ತಿರುವ ₹ 7,500 ಸಹಾಯಧನವನ್ನು ದ್ವಿಗುಣಗೊಳಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>