2017ರ ಹಿಂದಿನ ಅರ್ಹತೆಗೆ ಅನುಗುಣವಾಗಿ ನೌಕರರನ್ನು ಕಾಯಂಗೊಳಿಸಬೇಕು ಅಥವಾ ‘ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ನಿಯಮ’ಕ್ಕೆ ತಿದ್ದುಪಡಿ ತಂದು ಆರ್ಥಿಕ ಇಲಾಖೆ ಅಭಿಪ್ರಾಯ ಪಡೆದು ಒಂದು ತಿಂಗಳ ಒಳಗಾಗಿ ಕರಡು ನಿಯಮ ರಚಿಸಬೇಕು. ಪೌರಕಾರ್ಮಿಕರ ದಿನಾ ಚರಣೆ ಅಂಗವಾಗಿ ₹ 3,500 ವಿಶೇಷ ಭತ್ಯೆ ನೀಡುತ್ತಿದ್ದು, ಅದನ್ನು ₹ 7 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಹೇಳಿದರು.