ಈ ಕುರಿತು ಮುಖ್ಯಮಂತ್ರಿಗೆ ಮಂಗಳವಾರ ಪತ್ರ ಬರೆದಿರುವ ಅವರು, ‘ಎರಡನೇ ಲಾಕ್ಡೌನ್ ಅವಧಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ನೆರವು ನೀಡಲು ರಾಜ್ಯ ಸರ್ಕಾರ ₹ 1,250 ಕೋಟಿ ಮೊತ್ತದ ಪ್ಯಾಕೇಜ್ ಘೋಷಿಸಿದೆ. ಅದರಲ್ಲಿ ನೇಕಾರ ಸಮುದಾಯವನ್ನು ಕಡೆಗಣಿಸಿರುವುದು ಖಂಡನೀಯ. ರೈತರಷ್ಟೇ ನೇಕಾರರೂ ಮುಖ್ಯ ಎಂಬುದನ್ನು ಸರ್ಕಾರ ಮರೆತಂತಿದೆ’ ಎಂದಿದ್ದಾರೆ.