ಬಿಜೆಪಿಯದ್ದು ಮಲತಾಯಿ ಧೋರಣೆ: ಮುನಿಯಪ್ಪ

ಚಿತ್ರದುರ್ಗ: ರಾಜ್ಯದ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ರೈಲ್ವೆ ಖಾತೆ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಆರೋಪಿಸಿದರು.
ಮಾದಾರ ಚನ್ನಯ್ಯ ಗುರುಪೀಠಕ್ಕೆ ಭಾನುವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದೊಂದಿಗೆ ಮಾಡಿ ಕೊಂಡ ಒಪ್ಪಂದದ ಪ್ರಕಾರ ರೈಲ್ವೆ ಯೋಜನೆಗಳು ಸಾಕಾರಗೊಳ್ಳಬೇಕು ಎಂದು ಒತ್ತಾಯಿಸಿದರು.
‘ಯುಪಿಎ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗ-ಹರಿಹರ, ದಾವಣಗೆರೆ- ಚಿತ್ರದುರ್ಗ–ತುಮಕೂರು, ಚಿಂತಾ ಮಣಿ–ಮದನಪಲ್ಲಿ, ತುಮಕೂರು- ರಾಯದುರ್ಗ ರೈಲ್ವೆ ಸಂಪರ್ಕ ಯೋಜನೆಗಳಿಗೆ ಒತ್ತುಕೊಡಲಾಗಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಭೂಮಿ ಹಾಗೂ ಅರ್ಧ ವೆಚ್ಚ ಭರಿಸುವುದಾಗಿ ಆಶ್ವಾ ಸನೆ ನೀಡಿದ್ದರು. ಆದರೆ, ಯೋಜನೆ
ಅನುಷ್ಠಾನಗೊಳಿಸದೇ ಮಾತಿಗೆ ತಪ್ಪಿದ್ದಾರೆ’ ಎಂದು ಮುನಿಯಪ್ಪ ಅವರು ದೂರಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.