ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ರೈತ ಕುಟುಂಬದಲ್ಲಿ ಹುಟ್ಟಿದ ದೇವೇಗೌಡರು ದೇಶದ ಪ್ರಧಾನಿಯಾಗಿ ಕೆಂಪುಕೋಟೆಯಲ್ಲಿ ನಿಂತು ರಾಷ್ಟ್ರ ಧ್ವಜಾರೋಹಣ ಮಾಡಿರುವುದು ಎಲ್ಲ ಕನ್ನಡಿಗರಿಗೂ ಹೆಮ್ಮೆಯ ವಿಚಾರ. ಹಿಂದಿನ ಪ್ರಧಾನಿಗಳು, ಈಗಿನ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲರೂ ದೇವೇಗೌಡರನ್ನು ಗೌರವಿಸುತ್ತಾರೆ. ಆದರೆ, ರಾಜಣ್ಣ ಕೆಟ್ಟದಾಗಿ ಮಾತನಾಡಿರುವುದು ನೋವಿನ ಸಂಗತಿ’ ಎಂದರು.