‘ಕೇಂದ್ರ ಸರ್ಕಾರ ರಾಜ್ಯಕ್ಕೆ 1.22 ಲಕ್ಷ ವಯಲ್ಗಳನ್ನು ಹಂಚಿಕೆ ಮಾಡಿದೆ. ರಾಜ್ಯದಲ್ಲಿ 3 ಲಕ್ಷ ಕೋವಿಡ್ ರೋಗಿಗಳಿದ್ದಾರೆ. ಕೆಲ ಸೋಂಕಿತರು ಯಾವುದೇ ವೈದ್ಯಕೀಯ ಮಾರ್ಗದರ್ಶನ ಇಲ್ಲದೆ ಮನೆಯಲ್ಲೇ ರೆಮ್ ಡಿಸಿವಿರ್ ಪಡೆಯುತ್ತಿರುವುದು ಗೊತ್ತಾಗಿದೆ. ಮನೆಯಲ್ಲಿ ದಾಸ್ತಾನು ಮಾಡುವುದು, ವೈದ್ಯರಿಂದ ಬರೆಸಿಕೊಂಡು ಔಷಧ ಪಡೆಯುವುದನ್ನು ಸಾರ್ವಜನಿಕರು ಮಾಡಬಾರದು. ವೈದ್ಯರು ಕೂಡ ಈ ರೀತಿ ಔಷಧಿ ಬರೆದು ಕೊಡಬಾರದು. ಅಗತ್ಯ ಇರುವವರಿಗೆ ಮಾತ್ರ ನೀಡಬೇಕು’ ಎಂದು ಎಚ್ಚರಿಕೆ ನೀಡಿದರು.