‘ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು’ ಎಂದು ಯಡಿಯೂರಪ್ಪ, ಭಾನುವಾರ ವಿಧಾನಸೌಧದಲ್ಲಿ ಹೇಳಿಕೆ ನೀಡಿದ್ದರು. ಆದರೆ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಹಲವರು ಸೋಮವಾರ ಬೆಳಿಗ್ಗೆ ಯಡಿಯೂರಪ್ಪ ಅವರನ್ನು ಭೇಟಿಮಾಡಿ, ‘ಗೊಲ್ಲ ಅಭಿವೃದ್ಧಿ ನಿಗಮ’ ಎಂಬುದಾಗಿ ಘೋಷಿಸುವಂತೆ ಒತ್ತಡ ಹಾಕಿದ್ದರು. ಆ ಬಳಿಕ ‘ಗೊಲ್ಲ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಆದೇಶ ಹೊರಬಿದ್ದಿತ್ತು ಎಂದು ಹೇಳಲಾಗುತ್ತಿದೆ.