ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲಭೈರವೇಶ್ವರ ಜಾನಪದ ಕಲಾಮೇಳ ರದ್ದು

Last Updated 20 ಸೆಪ್ಟೆಂಬರ್ 2020, 18:54 IST
ಅಕ್ಷರ ಗಾತ್ರ

ನಾಗಮಂಗಲ: ‘ಆದಿಚುಂಚನಗಿರಿ ಯಲ್ಲಿ ಪ್ರತಿವರ್ಷ ನಡೆಯುತ್ತಿದ್ದ ರಾಜ್ಯಮಟ್ಟದ ಕಾಲಭೈರವೇಶ್ವರ ಜಾನಪದ ಕಲಾ ಮೇಳವನ್ನು ಕೋವಿಡ್ ಕಾರಣ ರದ್ದುಪಡಿಸಲಾಗಿದೆ’ ಎಂದು ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

‘ಮಠವು ಜಾನಪದ ಕಲೆ ಮತ್ತು ಸಂಸ್ಕೃತಿಯನ್ನು ಪ್ರಸರಣ ಮಾಡುವ ಉದ್ದೇಶದಿಂದ ನಾಲ್ಕು ದಶಕಗಳಿಂದ ಪ್ರತಿವರ್ಷ ರಾಜ್ಯಮಟ್ಟದ ಕಾಲಭೈರವೇಶ್ವರ ಜಾನಪದ ಕಲಾ ಮೇಳವನ್ನು ಆಯೋಜಿಸುತ್ತಾ ಬಂದಿದೆ. ಈ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ 20 ಸಾವಿರಕ್ಕೂ ಅಧಿಕ ಕಲಾವಿದರು ಬರುತ್ತಿದ್ದರು. ಆದರೆ, ಈಗ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಜನರ ಆರೋಗ್ಯದ ಹಿತದೃಷ್ಟಿಯಿಂದ ಮೇಳ ರದ್ದು
ಪಡಿಸಲಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT