‘ಮಠವು ಜಾನಪದ ಕಲೆ ಮತ್ತು ಸಂಸ್ಕೃತಿಯನ್ನು ಪ್ರಸರಣ ಮಾಡುವ ಉದ್ದೇಶದಿಂದ ನಾಲ್ಕು ದಶಕಗಳಿಂದ ಪ್ರತಿವರ್ಷ ರಾಜ್ಯಮಟ್ಟದ ಕಾಲಭೈರವೇಶ್ವರ ಜಾನಪದ ಕಲಾ ಮೇಳವನ್ನು ಆಯೋಜಿಸುತ್ತಾ ಬಂದಿದೆ. ಈ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ 20 ಸಾವಿರಕ್ಕೂ ಅಧಿಕ ಕಲಾವಿದರು ಬರುತ್ತಿದ್ದರು. ಆದರೆ, ಈಗ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಜನರ ಆರೋಗ್ಯದ ಹಿತದೃಷ್ಟಿಯಿಂದ ಮೇಳ ರದ್ದು
ಪಡಿಸಲಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.