ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣದಲ್ಲಿ ಕೇಸರೀಕರಣ ಇಲ್ಲ: ಬೊಮ್ಮಾಯಿ

Last Updated 14 ನವೆಂಬರ್ 2022, 6:40 IST
ಅಕ್ಷರ ಗಾತ್ರ

ಕಲಬುರಗಿ: ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ರಾಜ್ಯದಾದ್ಯಂತ ವಿವೇಕ ಹೆಸರಿನ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ವಿವೇಕರ ಹೆಸರಿನಲ್ಲಿ ಕೊಠಡಿ ನಿರ್ಮಾಣ ಮಾಡುವುದು ಕೇಸರೀಕರಣವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಕಲಬುರಗಿ ವಿಮಾನ ನಿಲ್ದಾಣದ ಬಳಿ ಇರುವ ಮಡಿಹಾಳ ಗ್ರಾಮದಲ್ಲಿ ಸೋಮವಾರ ವಿವೇಕ ಹೆಸರಿನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಕಡೆಗಳಲ್ಲಿ ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಹೀಗಾಗಿ ರಾಜ್ಯ ಸರ್ಕಾರ 7601 ಶಾಲಾ ಹಾಗೂ ಕಾಲೇಜುಗಳ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದರು ಧರಿಸಿದ್ದು ಖಾವಿ, ರಾಷ್ಟ್ರಧ್ವಜದಲ್ಲಿರುವುದು ಕೇಸರಿ ಬಣ್ಣ. ಹಾಗಾಗಿ ನೂತನ ಕೊಠಡಿಗಳು ಕೇಸರಿ ಬಣ್ಣದಲ್ಲಿ ಇದ್ದರೆ ತಪ್ಪೇನು? ಈ ಯೋಜನೆಯನ್ನು ವಿರೋಧಿಸುವವರು ಅಭಿವೃದ್ಧಿಯನ್ನು ಸಹಿಸದವರು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.‌ನಾಗೇಶ್, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಸಂಸದ ಡಾ. ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ಸುಭಾಷ್ ಗುತ್ತೇದಾರ, ಡಾ.ಅವಿನಾಶ್ ಜಾಧವ, ವಿಧಾನ ಪರಿಷತ್ ಸದಸ್ಯರಾದ ಬಾಬುರಾವ್ ಚಿಂಚನಸೂರ, ಶಶೀಲ್ ನಮೋಶಿ, ಬಿ.ಜಿ. ಪಾಟೀಲ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT