ಗುರುಪೀಠದ ತಿಂಥಿಣಿ ಶಾಖಾ ಮಠದಲ್ಲಿ ಇದೇ 12ರಿಂದ ಹಾಲುಮತ ಸಂಸ್ಕೃತಿ ವೈಭವ–2022 ಪ್ರಾರಂಭವಾಗಲಿದೆ. 13ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕೇಂದ್ರ ಸಚಿವ ಭಗವಂತ ಖೂಬಾ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ತಿಂಥಿಣಿ ಮಠದ ಪೀಠಾಧ್ಯಕ್ಷ ಸಿದ್ಧರಾಮಾನಂದಪುರಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಪೀಠದ ಸಂಚಾಲಕ ಆರ್.ಪಿ. ಸಾಂಬಸದಾಶಿವ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.