ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡದ ಸಮಗ್ರ ಮಸೂದೆ ಡಿಸೆಂಬರ್‌ನಲ್ಲಿ ಜಾರಿ: ಸುನಿಲ್ ಕುಮಾರ್

Last Updated 1 ನವೆಂಬರ್ 2022, 9:29 IST
ಅಕ್ಷರ ಗಾತ್ರ

ಮಂಗಳೂರು: 'ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕೆ ಕನ್ನಡ ಸಮಗ್ರ ಮಸೂದೆಯನ್ನು ಡಿಸೆಂಬರ್ ನಲ್ಲಿ ಅಂಗೀಕರಿಸಿ ಜಾರಿಗೊಳಿಸಲಿದ್ದೇವೆ' ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಇಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಂಗಳವಾರ ಮಾತನಾಡಿದರು.
'ನ್ಯಾಯಾಲಯದ ಕಲಾಪಗಳು ಕನ್ನಡದಲ್ಲಿ ನಡೆಯಬೇಕಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ ಸಿಗಬೇಕಿದೆ. ಸರ್ಕಾರದ ಎಲ್ಲ ಸುತ್ತೋಲೆಗಳು ಕನ್ನಡದಲ್ಲಿ ಇರಬೇಕು. ಈ ಉದ್ದೇಶದಿಂದ ಕನ್ನಡ ಸಮಗ್ರ ಮಸೂದೆಯನ್ನು ರೂಪಿಸಿದ್ದೇವೆ. ಈ ಕುರಿತು ಸಾರ್ವಜನಿಕರು ಅಗತ್ಯ ಸಲಹೆಗಳನ್ನು ನೀಡಬೇಕು' ಎಂದರು‌.

'ದಕ್ಷಿಣ ಕನ್ನಡ ಜಿಲ್ಲೆಯ 275 ಕನ್ನಡದ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ. ಈ ಶಾಲೆಗಳಲ್ಲಿ ಕೊಠಡಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಒಟ್ಟು 39 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಮಕ್ಕಳು ಗಣಿತ ಮತ್ತು ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಳ್ಳುವಂತೆ ಮಾಡಲು ಜಿಲ್ಲೆಯ 27 ಶಾಲೆಗಳನ್ನು ಅಮೃತ ಶಾಲೆ ಎಂದು ಗುರುತಿಸಿ ಅಧ್ಯಯನಕ್ಕೆ ವಿಶೇಷ ಸೌಕರ್ಯ ಕಲ್ಪಿಸಲಾಗುತ್ತದೆ' ಎಂದರು‌.

'ಗಡಿ ಗ್ರಾಮಗಳ ಅಭಿವೃದ್ಧಿಗೆ 21ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಯ್ಯಾರ ಕಿಞ್ಞಣ್ಣ ರೈ ಸ್ಮಾರಕ ನಿರ್ಮಾಣಕ್ಕೆ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ರಾಷ್ಟ್ರ ಕವಿ ಗೋವಿಂದ ಪೈ ಅವರ ಸಂಶೋಧನ ಲೇಖನಗಳ ಮರುಮುದ್ರಣಕ್ಕೆ 30 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ' ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕುಮಾರ್, ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಇದ್ದರು.

34 ಮಂದಿಗೆ ಹಾಗೂ 20 ಸಂಘ ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT