ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನದ ಭಾಗವಾಗಿ ಹಮ್ಮಿಕೊಂಡಿರುವ ‘ರಂಗಾಯಣ ನಾಟಕ ತಿರುಗಾಟಕ್ಕೆ’ ನಗರದಲ್ಲಿ ಗುರುವಾರ ಚಾಲನೆ ನೀಡಿ, ಮಾತನಾಡಿದರು. ‘ಈ ಬಾರಿ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಈಗಿನಿಂದಲೇ ತಯಾರಿ ಪ್ರಾರಂಭಿಸಲಾಗಿದೆ. ‘ಪದ್ಮ ಪ್ರಶಸ್ತಿ’ಗೆ ಸಾಧಕರನ್ನು ಆಯ್ಕೆ ಮಾಡಿದ ಮಾದರಿಯಲ್ಲಿಯೇ ರಾಜ್ಯೋತ್ಸವ ಪ್ರಶಸ್ತಿಗೂ ತೆರೆಮರೆಯಲ್ಲಿರುವ ಸಾಧಕರನ್ನು ಗುರುತಿಸಿ, ಗೌರವಿಸಲಾಗುತ್ತದೆ. ಆಯ್ಕೆ ಸಮಿತಿಯನ್ನು ಆದಷ್ಟು ಬೇಗ ರಚನೆ ಮಾಡಲಾಗುವುದು’ ಎಂದು ಹೇಳಿದರು.