ಬೆಂಗಳೂರು: ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ನೋಂದಾಯಿಸಲ್ಪಟ್ಟ ಸಾಂಸ್ಕೃತಿಕ ಸಂಘ–ಸಂಸ್ಥೆಗಳಿಗೆ ನೀಡುವ ವಾರ್ಷಿಕ ಅನುದಾನದ ಗರಿಷ್ಠ ಮೊತ್ತವನ್ನು ₹ 2.5 ಲಕ್ಷಕ್ಕೆ ಸೀಮಿತಗೊಳಿಸಲಾಗಿದೆ’ ಎಂದು ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
‘ಸಂಘ–ಸಂಸ್ಥೆಗಳಿಗೆ ನೀಡುತ್ತಿದ್ದ ಅನುದಾನ ಹಂಚಿಕೆಯಲ್ಲಿ ಕೆಲ ಸಂಘ–ಸಂಸ್ಥೆಗಳು ಏಕಸ್ವಾಮ್ಯ ಸ್ಥಾಪಿಸಿವೆ. ಬೋಗಸ್ ಸಂಸ್ಥೆಗಳ ಪಾಲಿಗೆ ಅನುದಾನ ಸೇರುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ, ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.