ನಗರದಲ್ಲಿ ಬುಧವಾರ ನಡೆದ ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಪ್ರಥಮ ಸಭೆಯನ್ನು ಉದ್ಘಾಟಿಸಿ, ಮಾತನಾಡಿದರು. ‘ಬರಹಗಾರರ ಮತ್ತು ಪ್ರಕಾಶಕರ ಸಂಘದ ಕೋರಿಕೆಯಂತೆ ಕನ್ನಡದ ಪುಸ್ತಕಗಳ 300 ಪ್ರತಿಗಳ ಖರೀದಿಯನ್ನು 500 ಪ್ರತಿಗಳಿಗೆ ಹೆಚ್ಚಿಸಲಾಗುವುದು. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳ ಮಹತ್ವದ ಕುರಿತು ಅರಿವು ಮೂಡಿಸಿ, ಅಧ್ಯಯನದ ಅಭಿರುಚಿ ಬೆಳೆಸಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತಂತೆ ಪುಸ್ತಕ ಸಮಿತಿಯು ರೂಪುರೇಷೆ ಸಿದ್ಧಪಡಿಸಬೇಕು’ ಎಂದು ಮನವಿ ಮಾಡಿದರು.