‘ರಾಜ್ಯ ಸರ್ಕಾರ ಆಡಳಿತದಲ್ಲಿ ಕನ್ನಡವನ್ನು ಪೂರ್ಣಪ್ರಮಾಣದಲ್ಲಿ ಜಾರಿಗೊಳಿಸಲು ಕಾಲಕಾಲಕ್ಕೆ ಆದೇಶಗಳನ್ನು ಹೊರಡಿಸಿದೆ. ಅದಾಗಿಯೂ ಕೈಗಾರಿಕಾ ಒಕ್ಕೂಟ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿದೆ. ಇದು ರಾಜ್ಯ ಸರ್ಕಾರದ ಕನ್ನಡ ಪರ ಆದೇಶಗಳ ಸ್ಪಷ್ಟ ಉಲ್ಲಂಘನೆ. ಸಂಬಂಧಪಟ್ಟ ಅಧಿಕಾರಿ, ನೌಕರರ ಮೇಲೆ ಶಿಸ್ತು ಕ್ರಮ ಜಾರಿಗೊಳಿಸಬೇಕು’ ಎಂದು ಪತ್ರದಲ್ಲಿ ಸೂಚಿಸಿದ್ದಾರೆ.