‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ಭಾಷೆಯು ನಮಗೆ ಆದ್ಯತೆ ಆಗಬೇಕೇ ಹೊರತು ಆಯ್ಕೆ ಆಗಬಾರದು. ಕನ್ನಡ ಭಾಷೆ ಬಳಸದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ತಾವುಗಳು ಭಾಗವಹಿಸಿರುವುದರಿಂದ ಪ್ರಾಧಿಕಾರದ ಜತೆಗೆ ಸರ್ಕಾರಕ್ಕೂ ಮುಜುಗರ ಉಂಟಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಪ್ರಾಧಿಕಾರವನ್ನು ಗುರುತು ಮಾಡಿ, ಟೀಕಿಸುತ್ತಿದ್ದಾರೆ. ಈ ಸರ್ಕಾರಕ್ಕೆ ಕನ್ನಡದ ಬದ್ಧತೆಯಿಲ್ಲ ಎಂಬಂತೆ ಚರ್ಚೆ ಮಾಡುತ್ತಿದ್ದಾರೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.