ಬೆಂಗಳೂರು: ರಾಜ್ಯ ಸರ್ಕಾರವು ನಟ ಸುದೀಪ್ ಅವರನ್ನು 'ಪುಣ್ಯಕೋಟಿ ದತ್ತು ಯೋಜನೆ'ಗೆ ರಾಯಭಾರಿಯಾಗಿನೇಮಕ ಮಾಡಿದೆ. ಇದು ಹಸುಗಳನ್ನು ದತ್ತು ಸ್ವೀಕರಿಸುವ ಯೋಜನೆಯಾಗಿದೆ.
ಸುದೀಪ್ ಅವರ ಜನ್ಮದಿನದಂದು ಈ ಕುರಿತು ಪಶುಸಂಗೋಪನೆ ಸಚಿವ ಪ್ರಭು ಬಿ ಚವಾಣ್ ಅವರು ಟ್ವೀಟ್ ಮೂಲಕ ಘೋಷಣೆ ಮಾಡಿದ್ದಾರೆ.
ಸುದೀಪ್ ಅವರು ಯಾವುದೇ ಶುಲ್ಕವನ್ನು ಪಡೆಯುತ್ತಿಲ್ಲ ಎಂದು ಇದೇ ವೇಳೆ ಚವಾಣ್ ತಿಳಿಸಿದ್ದಾರೆ. ಗೋಶಾಲೆಗಳ ಅಭಿವೃದ್ಧಿ ನಿಟ್ಟಿನಲ್ಲಿ ಹಾಗೂ ಗೋವುಗಳನ್ನು ದತ್ತು ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಸುದೀಪ್ ಅವರನ್ನು ರಾಯಭಾರಿ ಆಗಿ ನೇಮಕ ಮಾಡಲಾಗಿದೆ.
ಗೋವುಗಳ ಸಂರಕ್ಷಣೆಯಲ್ಲಿ ಜನರ ಪಾಲುದಾರಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಜಾರಿಮಾಡಲಾದ ನಮ್ಮ ಇಲಾಖೆಯ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಚುರಪಡಿಸಲು & ಉತ್ತೇಜಿಸಲು ನಟ, ನಿರ್ದೇಶಕ ಅಭಿನಯ ಚಕ್ರವರ್ತಿ @KicchaSudeep ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸುತ್ತೇನೆ.(1/3) pic.twitter.com/syOOXUA4oX