ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ಸುದೀಪ್‌ 'ಪುಣ್ಯಕೋಟಿ ದತ್ತು ಯೋಜನೆ'ಗೆ ರಾಯಭಾರಿ

Last Updated 3 ಸೆಪ್ಟೆಂಬರ್ 2022, 10:38 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರವು ನಟ ಸುದೀಪ್‌ ಅವರನ್ನು 'ಪುಣ್ಯಕೋಟಿ ದತ್ತು ಯೋಜನೆ'ಗೆ ರಾಯಭಾರಿಯಾಗಿನೇಮಕ ಮಾಡಿದೆ. ಇದು ಹಸುಗಳನ್ನು ದತ್ತು ಸ್ವೀಕರಿಸುವ ಯೋಜನೆಯಾಗಿದೆ.

ಸುದೀಪ್‌ ಅವರ ಜನ್ಮದಿನದಂದು ಈ ಕುರಿತು ಪಶುಸಂಗೋಪನೆ ಸಚಿವ ಪ್ರಭು ಬಿ ಚವಾಣ್‌ ಅವರು ಟ್ವೀಟ್‌ ಮೂಲಕ ಘೋಷಣೆ ಮಾಡಿದ್ದಾರೆ.

ಸುದೀಪ್‌ ಅವರು ಯಾವುದೇ ಶುಲ್ಕವನ್ನು ಪಡೆಯುತ್ತಿಲ್ಲ ಎಂದು ಇದೇ ವೇಳೆ ಚವಾಣ್‌ ತಿಳಿಸಿದ್ದಾರೆ. ಗೋಶಾಲೆಗಳ ಅಭಿವೃದ್ಧಿ ನಿಟ್ಟಿನಲ್ಲಿ ಹಾಗೂ ಗೋವುಗಳನ್ನು ದತ್ತು ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಸುದೀಪ್‌ ಅವರನ್ನು ರಾಯಭಾರಿ ಆಗಿ ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT