ಚಲನಚಿತ್ರ ಕ್ಷೇತ್ರಕ್ಕೆ ₹6.60 ಕೋಟಿ ಬಿಡುಗಡೆ

ಬೆಂಗಳೂರು: ಕೋವಿಡ್ ಎರಡನೇ ಅಲೆಯ ಲಾಕ್ಡೌನ್ನಿಂದ ಸಂಕಷ್ಟಕ್ಕೆ ತುತ್ತಾಗಿದ್ದ ಸಿನಿಮಾ ಮತ್ತು ಕಿರುತೆರೆಯ ಕಲಾವಿದರು ಮತ್ತು ತಂತ್ರಜ್ಞರಿಗೆ ರಾಜ್ಯ ಸರ್ಕಾರ ₹6.60 ಕೋಟಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದ ಆರ್ಥಿಕ ಪ್ಯಾಕೇಜ್ನಲ್ಲಿ ಈ ಕ್ಷೇತ್ರದವರನ್ನೂ ಸೇರಿಸಲಾಗಿತ್ತು. ಸುಮಾರು 22 ಸಾವಿರ ಜನರಿಗೆ ತಲಾ ₹3,000 ಪರಿಹಾರ ಸಿಗಲಿದೆ. ಚಲನಚಿತ್ರ ಕ್ಷೇತ್ರದವರೂ ಸಂಕಷ್ಟದಲ್ಲಿದ್ದು ಅವರಿಗೂ ಪರಿಹಾರ ನೀಡಬೇಕು ಎಂದು ಹಲವು ನಟ–ನಟಿಯರು ಸರ್ಕಾರಕ್ಕೆ ಮನವಿ ಮಾಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.