‘ಬೆಂಗಳೂರಿಗೆ ಬರಿಗೈಲಿ ಬಂದು 50ಕ್ಕೂ ಹೆಚ್ಚು ಸಿನಿಮಾ ನಿರ್ದೇಶನ ಮಾಡಿದ ನಾರಾಯಣ್ ಅವರ ಸಾಧನೆ ಶ್ಲಾಘನೀಯ. ಕೋವಿಡ್ನಿಂದ ಚಿತ್ರರಂಗ, ಪ್ರವಾಸೋದ್ಯಮ ಎಲ್ಲವೂ ನೆಲಕಚ್ಚಿವೆ. ಚಿತ್ರಮಂದಿರ ಮಾಲೀಕರಿಂದ ಹಿಡಿದು ಕಲಾವಿದರು, ತಂತ್ರಜ್ಞರು ಎಲ್ಲರೂ ಸಂಕಷ್ಟದಲ್ಲಿದ್ದಾರೆ. ಎಲ್ಲರ ಬಡ್ಡಿ ಮೀಟರ್ ಏರುತ್ತಲೇ ಇದೆ. ಎಷ್ಟೋ ಕಲಾವಿದರು, ನಿರ್ಮಾಪಕರು ಬೀದಿಗೆ ಬಿದ್ದಿದ್ದಾರೆ. ಲಾಕ್ ಡೌನ್ನಿಂದ ಬಾಡಿಗೆ, ವಿದ್ಯುತ್ ಬಿಲ್ ಕಟ್ಟಲು ಚಿತ್ರಮಂದಿರ ಮಾಲೀಕರಿಗೆ ಆಗುತ್ತಿಲ್ಲ. ಸರ್ಕಾರ ಯಾವುದೇ ಸಹಕಾರ ನೀಡುತ್ತಿಲ್ಲ. ಸಂಕಷ್ಟದಲ್ಲಿರುವವರಿಗೆ ಧೈರ್ಯ ತುಂಬುವ ಪ್ರಯತ್ನ ಮಾಡಿಲ್ಲ. ಸರ್ಕಾರ ಈ ಬಗ್ಗೆ ಕಾಳಜಿ ವಹಿಸಬೇಕು’ ಎಂದರು.