<p><strong>ಬೆಂಗಳೂರು:</strong> ‘ಕನ್ನಡ ಕಂಕಣ’ವು ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಲಿ ಎಂದುಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಆಶಿಸಿದರು.</p>.<p>ಕನಕಪುರ ರಸ್ತೆ ಕನ್ನಡ ಬಳಗದ ವತಿಯಿಂದ ಪ್ರತಿ ತಿಂಗಳು ಆಚರಿಸುವ ‘ಕನಕಪುರ ರಸ್ತೆಯಲ್ಲಿ ಕನ್ನಡ ನಾದ’ ಕಾರ್ಯಕ್ರಮದ ಅಂಗವಾಗಿ ನಡೆದ ‘ಕನ್ನಡ ಕಂಕಣ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರಾಧಿಕಾರದ ವತಿಯಿಂದ ಆಚರಿಸುತ್ತಿರುವ ಕನ್ನಡ ಕಾಯಕ ವರ್ಷ ಕಾರ್ಯಕ್ರಮದ ಅಡಿಯಲ್ಲಿ ಹಲವಾರು ಕನ್ನಡ ಪರ ಯೋಜನೆಗಳು ಪ್ರಗತಿಯಲ್ಲಿದೆ. ಇದರ ಯಶಸ್ಸಿಗೆ ಕನ್ನಡಿಗರ ಸ್ಪಂದನ ಮತ್ತು ಬದ್ಧತೆ ಅಗತ್ಯ’ ಎಂದು ಹೇಳಿದರು.</p>.<p>ಹಿರಿಯ ಹೋರಾಟಗಾರ ರಾ.ನಂ.ಚಂದ್ರಶೇಖರ ಮಾತನಾಡಿ, ‘ಕನ್ನಡ ಕಂಕಣ’ ಮಾದರಿಯಲ್ಲಿ ಇಲ್ಲಿ ಹಲವಾರು ಕಾರ್ಯಕ್ರಮಗಳು ನಡೆದಿವೆ. ‘ಉದ್ಯಾನವನದಲ್ಲಿ ಕನ್ನಡ’ ಎಂಬ ಕಾರ್ಯಕರಮವೂ ನಡೆದಿತ್ತು. ಇಂತಹ ಕಾರ್ಯಕ್ರಮಗಳು ಇನ್ನೂ ಹೆಚ್ಚಬೇಕು ಎಂದು ಹೇಳಿದರು.</p>.<p>ಅಲೀಮ್, ಜ್ಞಾನ್ ಮಧು, ಲಲ್ಲೂ, ನಿಶಾ ಅವರಿಗೆ ಅಪ್ರತಿಮ ಕನ್ನಡಿಗ ಪ್ರಶಸ್ತಿ, ಅನುಪಮ, ಶ್ರೀನಾಥ್ ಅವರಿಗೆ ಉದಯೋನ್ಮುಖ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಹಿರಿಯ ಸಾಹಿತಿ ಜರಗನಹಳ್ಳಿ ಶಿವಶಂಕರ್ ಅಧ್ಯಕ್ಷತೆ ವಹಿಸಿದ್ದರು. ಬಳಗದ ಅಧ್ಯಕ್ಷೆ ಭಾರ್ಗವಿ ಹೇಮಂತ್, ಕಾರ್ಯಕ್ರಮ ಪರಿಕಲ್ಪನೆ ರೂಪಿಸಿದ ಮಂಜುನಾಥ ಹಾಲುವಾಗಿಲು, ದಿಲೀಪ್ ಇದ್ದರು. ನೂರೈವತ್ತಕ್ಕೂ ಹೆಚ್ಚು ಮಂದಿಗೆ ‘ಕನ್ನಡ ಕಂಕಣ’ ತೊಡಿಸಿ ನಿರಂತರ ಕನ್ನಡ ಕಲಿಕೆ ಮತ್ತು ಬಳಕೆಯ ಪ್ರತಿಜ್ಞೆ ಬೋಧಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕನ್ನಡ ಕಂಕಣ’ವು ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಲಿ ಎಂದುಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಆಶಿಸಿದರು.</p>.<p>ಕನಕಪುರ ರಸ್ತೆ ಕನ್ನಡ ಬಳಗದ ವತಿಯಿಂದ ಪ್ರತಿ ತಿಂಗಳು ಆಚರಿಸುವ ‘ಕನಕಪುರ ರಸ್ತೆಯಲ್ಲಿ ಕನ್ನಡ ನಾದ’ ಕಾರ್ಯಕ್ರಮದ ಅಂಗವಾಗಿ ನಡೆದ ‘ಕನ್ನಡ ಕಂಕಣ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರಾಧಿಕಾರದ ವತಿಯಿಂದ ಆಚರಿಸುತ್ತಿರುವ ಕನ್ನಡ ಕಾಯಕ ವರ್ಷ ಕಾರ್ಯಕ್ರಮದ ಅಡಿಯಲ್ಲಿ ಹಲವಾರು ಕನ್ನಡ ಪರ ಯೋಜನೆಗಳು ಪ್ರಗತಿಯಲ್ಲಿದೆ. ಇದರ ಯಶಸ್ಸಿಗೆ ಕನ್ನಡಿಗರ ಸ್ಪಂದನ ಮತ್ತು ಬದ್ಧತೆ ಅಗತ್ಯ’ ಎಂದು ಹೇಳಿದರು.</p>.<p>ಹಿರಿಯ ಹೋರಾಟಗಾರ ರಾ.ನಂ.ಚಂದ್ರಶೇಖರ ಮಾತನಾಡಿ, ‘ಕನ್ನಡ ಕಂಕಣ’ ಮಾದರಿಯಲ್ಲಿ ಇಲ್ಲಿ ಹಲವಾರು ಕಾರ್ಯಕ್ರಮಗಳು ನಡೆದಿವೆ. ‘ಉದ್ಯಾನವನದಲ್ಲಿ ಕನ್ನಡ’ ಎಂಬ ಕಾರ್ಯಕರಮವೂ ನಡೆದಿತ್ತು. ಇಂತಹ ಕಾರ್ಯಕ್ರಮಗಳು ಇನ್ನೂ ಹೆಚ್ಚಬೇಕು ಎಂದು ಹೇಳಿದರು.</p>.<p>ಅಲೀಮ್, ಜ್ಞಾನ್ ಮಧು, ಲಲ್ಲೂ, ನಿಶಾ ಅವರಿಗೆ ಅಪ್ರತಿಮ ಕನ್ನಡಿಗ ಪ್ರಶಸ್ತಿ, ಅನುಪಮ, ಶ್ರೀನಾಥ್ ಅವರಿಗೆ ಉದಯೋನ್ಮುಖ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಹಿರಿಯ ಸಾಹಿತಿ ಜರಗನಹಳ್ಳಿ ಶಿವಶಂಕರ್ ಅಧ್ಯಕ್ಷತೆ ವಹಿಸಿದ್ದರು. ಬಳಗದ ಅಧ್ಯಕ್ಷೆ ಭಾರ್ಗವಿ ಹೇಮಂತ್, ಕಾರ್ಯಕ್ರಮ ಪರಿಕಲ್ಪನೆ ರೂಪಿಸಿದ ಮಂಜುನಾಥ ಹಾಲುವಾಗಿಲು, ದಿಲೀಪ್ ಇದ್ದರು. ನೂರೈವತ್ತಕ್ಕೂ ಹೆಚ್ಚು ಮಂದಿಗೆ ‘ಕನ್ನಡ ಕಂಕಣ’ ತೊಡಿಸಿ ನಿರಂತರ ಕನ್ನಡ ಕಲಿಕೆ ಮತ್ತು ಬಳಕೆಯ ಪ್ರತಿಜ್ಞೆ ಬೋಧಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>