‘ಕನ್ನಡ ಭಾಷಾ ಬೆಳವಣಿಗೆಯ ಹಿತದೃಷ್ಟಿಯಿಂದ ಆಡಳಿತ, ಶಿಕ್ಷಣ, ತಂತ್ರಜ್ಞಾನ, ನ್ಯಾಯಾಂಗ ಹಾಗೂ ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ ಸಿಗಬೇಕಿದೆ. ಈ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಲಿಪಿಯಲ್ಲೇ ಇ-ಮೇಲ್ ಸೇವೆಯನ್ನು ಎಲ್ಲ ಕನ್ನಡಿಗರಿಗೆ ನೀಡುವ ಸದುದ್ದೇಶದಿಂದ ಸರ್ಕಾರವು ಈಗಿರುವ ‘ಭಾರತ್’ (ಡಾಟ್ಭಾರತ್) ಸೇವೆ ಬಳಸಿಕೊಳ್ಳಬೇಕು. ಆಗ ಎಲ್ಲ ಜಾಲತಾಣಗಳನ್ನು ಕನ್ನಡಕ್ಕೆ ಬದಲಾಯಿಸಿದರೆ ಕನ್ನಡದಲ್ಲೇ ಇ-ಮೇಲ್ ಸೇವೆಯನ್ನೂ ನೀಡಬಹುದು’ ಎಂದರು.