ಹೀಗಾಗಿ ಇನ್ನು ಮುಂದೆ ರಾಷ್ಟ್ರಕವಿ ಕುವೆಂಪು ರಚಿಸಿರುವ "ಜಯಭಾರತ ಜನನಿಯ ತನುಜಾತೆ" ಕವನವು ನಾಡಗೀತೆಯಾಗಿ ಅಂಗೀಕೃತಗೊಂಡ ರೂಪದಲ್ಲೇ ಹಿಂದಿನ ಒಂದಕ್ಷರವನ್ನೂ ಬಿಡದಂತೆ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ಮಾಡಿದ ದಾಟಿಯಲ್ಲೇ ಹಾಡಲಾಗುತ್ತದೆ ಎಂದು ಕನ್ನಡ - ಇಂಧನ ಮತ್ತು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಏನಿದು ವಿವಾದ :
ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ 2005 ರಿಂದಲೂ ನನೆಗುದಿಗೆ ಬಿದ್ದಿತ್ತು . ಕೆಲವು ಕಾರ್ಯಕ್ರಮಗಳಲ್ಲಿ ಏಳರಿಂದ ಎಂಟು ನಿಮಿಷಗಳ ಕಾಲ ನಾಡಗೀತೆ ಹಾಡುತ್ತಿದ್ದರು. ಇದು ಅಶಕ್ತರು, ಅಂಗವಿಕಲರಿಗೆ ಅನನುಕೂಲವಾಗುತ್ತಿತ್ತು. ಹೀಗಾಗಿ ದಾಟಿ ಹಾಗೂ ಕಾಲ ಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂಬ ಒತ್ತಾಯ ಸರಕಾರದ ಮುಂದೆ ಇತ್ತು.
2006 ರಲ್ಲಿ ಸಾಹಿತಿ ವಸಂತ ಕನಕಾಪುರೆ ನೇತೃತ್ವದಲ್ಲಿ ಸರಕಾರ ಒಂದು ಸಮಿತಿ ರಚಿಸಿತ್ತು. ಆದರೆ ಅವರ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಅಧ್ಯಕ್ಷತೆಯಲ್ಲಿ ಸರಕಾರ ಮತ್ತೊಂದು ಸಮಿತಿ ರಚನೆ ಮಾಡಿತ್ತು. ಆದರೆ ಈ ಸಮಿತಿಯ ಸದಸ್ಯರಲ್ಲೇ ಸ್ಪಷ್ಟತೆ ಇರಲಿಲ್ಲ.