ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಧಾಟಿಯ ವಿಚಾರವಾಗಿರಾಜ್ಯದ ಕವಿಗಳು, ಸಂಗೀತಗಾರರ ಸಲಹೆಗಳನ್ನು ಕ್ರೋಡೀಕರಿಸಿ ನಿರ್ಣಯ ಕೈಗೊಳ್ಳಬೇಕು.ಎಚ್.ಆರ್.ಲೀಲಾವತಿ ನೇತೃತ್ವದ ಸಮಿತಿಯು ತರಾತುರಿಯಲ್ಲಿ ಧಾಟಿಯನ್ನು ಶಿಫಾರಸು ಮಾಡಿದ್ದು,ಮೈಸೂರು ಅನಂತಸ್ವಾಮಿ ಸಂಯೋಜನೆಯ ನಾಡಗೀತೆ ಅಂತಿಮಗೊಳಿಸಲು ತಿಳಿಸಲಾಗಿದೆ. ಆದರೆ, ಮೈಸೂರು ಅನಂತಸ್ವಾಮಿ ಅವರು ಸಂಪೂರ್ಣ ನಾಡಗೀತೆಗೆ ಸ್ವರ ಸಂಯೋಜಿಸಿಲ್ಲ’ ಎಂದು ತಿಳಿಸಿದರು.