‘ವೈವಿಧ್ಯ ಭಾರತವು ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದೆ. ಆಯಾ ರಾಜ್ಯಭಾಷೆಗಳನ್ನು ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೇ ತ್ರಿಭಾಷಾ ಸೂತ್ರ ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ನಾಡು–ನುಡಿಯ ಘನತೆಯನ್ನು ಮರೆತದ್ದು ಖಂಡನೀಯ’ ಎಂದಿದ್ದಾರೆ.