‘ದೆಹಲಿಯ ಹೈಕಮಾಂಡ್ ಓಲೈಸಲು ಇಂತಹ ಆತ್ಮಗೌರವವಿಲ್ಲದ ನಡೆಯನ್ನು ಇನ್ನೂ ಎಷ್ಟು ದಿನ ಮುಂದುವರಿಸುತ್ತೀರಿ ಸಿ.ಟಿ.ರವಿ ಅವರೇ? ಕನ್ನಡ ಭಾಷೆ, ಜಲ, ಕನ್ನಡಿಗರ ಬದುಕು, ಕರುನಾಡ ಏಳ್ಗೆ ಎಲ್ಲದರ ಬಗ್ಗೆಯೂ ಇಷ್ಟು ತಾತ್ಸಾರದ ನಡೆ ದುರಭಿಮಾನದಿಂದ ಕೂಡಿದೆ. ಹೈಕಮಾಂಡ್ ಗುಲಾಮಿ ಪಕ್ಷ ಎನ್ನಲು ಇದಕ್ಕಿಂತ ಹೆಚ್ಚೇನು ಬೇಕು?’ ಎಂದು ಪ್ರಶ್ನಿಸಿದೆ.