ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರುಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿವಂದಿತಾ ಶರ್ಮಾ ಅವರಿಗೆ ಪತ್ರ ಬರೆದಿದ್ದಾರೆ. ‘ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರ ಆದೇಶ ಹೊರಡಿಸಿ ಎರಡು ದಿನಗಳಾಗಿವೆ.ಅದಾಗಲೇಲೋಕೋಪಯೋಗಿ ಇಲಾಖೆ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ. ಆದ್ದರಿಂದ ಕನ್ನಡ ಕಡೆಗಣಿಸಿದವರಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.