‘ಕಾಶ್ಮೀರವಿಲ್ಲದ ಭಾರತ, ಬೆಳಗಾವಿಯಿಲ್ಲದ ಕರ್ನಾಟಕವನ್ನು ಉಹಿಸಿಕೊಳ್ಳುವುದೂ ಅಸಾಧ್ಯ. ಈಗ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಮಹಾಜನ್ ವರದಿಯ ಅನುಷ್ಠಾನ ಮತ್ತು ಉದ್ಧವ್ ಠಾಕ್ರೆ ಅವರ ಸರ್ಕಾರ ವಜಾ ಮಾಡಲು ಕ್ರಮಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಣಯ ಕೈಗೊಳ್ಳಬೇಕು. ಪಕ್ಷಾತೀತವಾಗಿ ಎಲ್ಲರೂ ಒಂದಾಗಿ ಈ ಕೆಲಸ ಮಾಡಬೇಕು. ಅವರು ವರ್ತಿಸುತ್ತಿರುವ ರೀತಿ ದೇಶದ ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿ’ ಎಂದು ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ ತಿಳಿಸಿದ್ದಾರೆ.