ಪುರಭವನದ ಎದುರು ಸೇರಿದ್ದ ಪ್ರತಿಭಟನಾಕಾರರು ಎಂಇಎಸ್ ವಿರುದ್ಧ ಧಿಕ್ಕಾರ ಕೂಗಿದರು. ‘ಬೇಕೆ ಬೇಕು ನ್ಯಾಯ ಬೇಕು’, ‘ನಮ್ಮ ನಾಡ ಧ್ವಜ ಸುಟ್ಟ ಕಿಡಿಗೇಡಿಗಳಿಗೆ ಧಿಕ್ಕಾರ’, ‘420 ಎಂಇಎಸ್ಗೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಿದರು. ಎಂಇಎಸ್ ಕಿಡಿಗೇಡಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲೂ ಉರುಳಾಡಿದರು. ಮುನ್ನೆಚ್ಚರಿಕೆ ದೃಷ್ಟಿಯಿಂದ ಪ್ರತಿಭಟನಾಕಾರರನ್ನು ಬಿಬಿಎಂಪಿ ಕೇಂದ್ರ ಕಚೇರಿ ಬಳಿ ಬಂಧಿಸಿದ ಪೊಲೀಸರು ಬಳಿಕ ಬಿಡುಗಡೆ ಮಾಡಿದರು.