<p><strong>ಬೆಂಗಳೂರು:</strong> ನಗರದ ಜ್ಞಾನ ಭಾರತಿಯ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಆವರಣದಲ್ಲಿ ದಲಿತ ಕವಿ ಸಿದ್ಧಲಿಂಗಯ್ಯ ಅವರ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.</p>.<p>ನೂರಾರು ಜನ ಸ್ಥಳದಲ್ಲಿದ್ದು, ಕೋವಿಡ್ ಮಾರ್ಗಸೂಚಿ ಪಾಲಿಸಲಾಗುತ್ತಿದೆ. ಬುದ್ಧನ ಪ್ರತಿಮೆ ಅಡಿ ಪಾರ್ಥಿವ ಶರೀರ ಇಡಲಾಗಿದೆ. ಸರದಿಯಲ್ಲಿ ಬಂದು ನಾಗರಿಕರು ಪುಷ್ಪನಮನ ಸಲ್ಲಿಸುತ್ತಿದ್ದಾರೆ.</p>.<p>ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಆರ್.ವೇಣುಗೋಪಾಲ, ಕುಲಸಚಿವರಾದ ಕೆ. ಜ್ಯೋತಿ, ಡಾ. ದೇವರಾಜ್, ಐಎಎಸ್ ಅಧಿಕಾರಿ ಕುಮಾರ ನಾಯ್ಕ್, ದಲಿತ ಮುಖಂಡ ಎಂ. ವೆಂಕಟಸ್ವಾಮಿ, ಪ್ರೊ. ಬಿ.ಕೆ.ರವಿ, ಪ್ರೊ. ಜಾಫೆಟ್ ಮತ್ತಿತರ ಗಣ್ಯರು ಇದ್ದಾರೆ.</p>.<p>ಸಿದ್ಧಲಿಂಗಯ್ಯನವರ ನಿವಾಸದಿಂದ ಪಾರ್ಥಿವ ಶರೀರವನ್ನು ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ 10.50ಕ್ಕೆ ತರಲಾಯಿತು. ಒಂದು ತಾಸು ಇಲ್ಲಿ ಇಡಲಾಗುತ್ತದೆ. ನಂತರ ಕಲಾಗ್ರಾಮದಲ್ಲಿ ಬೌದ್ಧ ಧರ್ಮದ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಜ್ಞಾನ ಭಾರತಿಯ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಆವರಣದಲ್ಲಿ ದಲಿತ ಕವಿ ಸಿದ್ಧಲಿಂಗಯ್ಯ ಅವರ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.</p>.<p>ನೂರಾರು ಜನ ಸ್ಥಳದಲ್ಲಿದ್ದು, ಕೋವಿಡ್ ಮಾರ್ಗಸೂಚಿ ಪಾಲಿಸಲಾಗುತ್ತಿದೆ. ಬುದ್ಧನ ಪ್ರತಿಮೆ ಅಡಿ ಪಾರ್ಥಿವ ಶರೀರ ಇಡಲಾಗಿದೆ. ಸರದಿಯಲ್ಲಿ ಬಂದು ನಾಗರಿಕರು ಪುಷ್ಪನಮನ ಸಲ್ಲಿಸುತ್ತಿದ್ದಾರೆ.</p>.<p>ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಆರ್.ವೇಣುಗೋಪಾಲ, ಕುಲಸಚಿವರಾದ ಕೆ. ಜ್ಯೋತಿ, ಡಾ. ದೇವರಾಜ್, ಐಎಎಸ್ ಅಧಿಕಾರಿ ಕುಮಾರ ನಾಯ್ಕ್, ದಲಿತ ಮುಖಂಡ ಎಂ. ವೆಂಕಟಸ್ವಾಮಿ, ಪ್ರೊ. ಬಿ.ಕೆ.ರವಿ, ಪ್ರೊ. ಜಾಫೆಟ್ ಮತ್ತಿತರ ಗಣ್ಯರು ಇದ್ದಾರೆ.</p>.<p>ಸಿದ್ಧಲಿಂಗಯ್ಯನವರ ನಿವಾಸದಿಂದ ಪಾರ್ಥಿವ ಶರೀರವನ್ನು ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ 10.50ಕ್ಕೆ ತರಲಾಯಿತು. ಒಂದು ತಾಸು ಇಲ್ಲಿ ಇಡಲಾಗುತ್ತದೆ. ನಂತರ ಕಲಾಗ್ರಾಮದಲ್ಲಿ ಬೌದ್ಧ ಧರ್ಮದ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>