ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ವಿ. ವಸಂತಕುಮಾರ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಹಾಗೂ ಸದಸ್ಯರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು. ಗಡಿ ಪ್ರದೇಶದಲ್ಲಿ ನಾಡು–ನುಡಿಯ ಶ್ರೇಯೋಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು. ಮಹಾರಾಷ್ಟ್ರದ ಗಡಿಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಸಭೆಯಲ್ಲಿ ಖಂಡನಾ ನಿರ್ಣಯ ಅಂಗೀಕರಿಸಲಾಯಿತು.