ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ: ಕನ್ನಡದಲ್ಲಿ ಮೋದಿ ಶುಭಾಶಯ

Last Updated 1 ನವೆಂಬರ್ 2021, 3:49 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಇಂದು 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಶುಭ ಕೋರಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ.‌‌‌ ಎಂದು ಟ್ವಿಟ್‌ನಲ್ಲಿ ತಿಳಿಸಿದ್ದಾರೆ.

ಸದ್ಯ, ಪ್ರಧಾನಿ ನರೇಂದ್ರ ಮೋದಿಯವರು ಗ್ಲಾಸ್ಗೋದಲ್ಲಿನ ಹವಾಮಾನ ಬದಲಾವಣೆಯ ವಿಶ್ವಸಂಸ್ಥೆಯ ಚೌಕಟ್ಟಿನ (ಯುಎನ್‌ಎಫ್‌ಸಿಸಿಸಿ) 26ನೇ ಕೋಪ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT