2023ರ ಜ.6, 7 ಹಾಗೂ 8ರಂದು ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ‘ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಭುವನಗಿರಿಯಲ್ಲಿರುವ ಭುವನೇಶ್ವರಿ ದೇವಾಲಯದಲ್ಲಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ರಥಕ್ಕೆ ಚಾಲನೆ ನೀಡಲಾಗುತ್ತದೆ.ಭುವನಗಿರಿಯಿಂದ ಹೊರಟ ಕನ್ನಡ ರಥದ ಜಾಥಾ, ರಾಜ್ಯದ ವಿವಿಧ ಭಾಗಗಳಲ್ಲಿ ಹಾಗೂ ಹಾವೇರಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಸಂಚರಿಸಲಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿಯೂ ಈ ರಥ ಪಾಲ್ಗೊಳ್ಳಲಿದೆ. ಈ ರಥದಲ್ಲಿನ ಜ್ಯೋತಿಯಿಂದಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮೇಳನ ಉದ್ಘಾಟಿಸುತ್ತಾರೆ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.