ಮಹೇಂದ್ರಗೌಡ ಅವರನ್ನು ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದು ಹಾಕಿರುವ ಪತ್ರದ ಪ್ರತಿಯನ್ನು ಹಲವರು ಫೇಸ್ಬುಕ್ನಲ್ಲಿ ಟ್ಯಾಗ್ ಮಾಡಿ ಟೀಕಿಸಿದ್ದಾರೆ. ತಮ್ಮ ಫೇಸ್ಬುಕ್ ಖಾತೆಯಲ್ಲಿ ಪತ್ರವನ್ನು ಟ್ಯಾಗ್ ಮಾಡಿರುವ ಲೇಖಕ ಕೆ.ಪಿ.ಸುರೇಶ, ‘ಮಹೇಶ್ ಜೋಶಿಗೆ ಬಿಜೆಪಿ ಬೆಂಬಲ ನೀಡಿರುವ ಅಧಿಕೃತ ಮಾಹಿತಿ ಇದು’ ಎಂದು ವ್ಯಂಗ್ಯವಾಡಿದ್ದಾರೆ.