<p><strong>ಮಂಡ್ಯ:</strong> ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ಕೇಂದ್ರ ಸ್ಥಾನಕ್ಕೆ ಸ್ಪರ್ಧಿಸಿರುವ ಸಕಲ ಅಭ್ಯರ್ಥಿಗಳು ಸಕ್ಕರೆ ಜಿಲ್ಲೆಯತ್ತ ಚಿತ್ತ ಹರಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ನಂತರ ಮಂಡ್ಯ ಜಿಲ್ಲೆ ಅತಿ ಹೆಚ್ಚು ಮತದಾರರನ್ನು ಹೊಂದಿದ್ದು, ಅಭ್ಯರ್ಥಿಗಳು ಈ ಕಡೆ ಪ್ರಯಾಣ ಬೆಳೆಸುತ್ತಿದ್ದಾರೆ.</p>.<p>ಬೆಂಗಳೂರು ನಗರ ಜಿಲ್ಲೆಯು 27 ವಿಧಾನಸಭಾ ಕ್ಷೇತ್ರ ಹಾಗೂ ಆನೇಕಲ್ ತಾಲ್ಲೂಕು ಸೇರಿ ಒಟ್ಟು 36,389 ಮತದಾರರನ್ನು ಹೊಂದಿದೆ. ಇದು ರಾಜ್ಯದಲ್ಲಿ ಅಧಿಕ. ನಂತರದ ಸ್ಥಾನದಲ್ಲಿರುವ ಮಂಡ್ಯ ಜಿಲ್ಲೆಯಲ್ಲಿ 24,207 ಮತದಾರರಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಅತಿ ಕಡಿಮೆ 1,984 ಮತದಾರರು ಇದ್ದಾರೆ.</p>.<p>ಮಂಡ್ಯ ತಾಲ್ಲೂಕಿನಲ್ಲೇ 11,623 ಮತದಾರರಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಮತದಾರರನ್ನು ಹೊಂದಿದ ತಾಲ್ಲೂಕು ಎನಿಸಿದೆ. ಹೀಗಾಗಿ, ಕಸಾಪ ಕೇಂದ್ರ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ಮಂಡ್ಯಕ್ಕೆ ಹೆಚ್ಚು ಗಮನ ಕೊಡುತ್ತಿದ್ದಾರೆ.</p>.<p>ಕಸಾಪ ಚುನಾವಣೆಗೆ ಸಂಬಂಧಿಸಿದಂತೆ ಸಭೆ, ಸಮಾರಂಭ ಸಾಮಾನ್ಯವಾಗಿವೆ. ಬಹುತೇಕ ಮಂದಿ ಅಭ್ಯರ್ಥಿಗಳು ಈಗಾಗಲೇ ಮಂಡ್ಯಕ್ಕೆ ಬಂದು ಮತಯಾಚನೆ ಮಾಡಿದ್ದಾರೆ. ಸಾಹಿತಿಗಳು, ಹೋರಾಟಗಾರರು, ಸಂಘ ಸಂಸ್ಥೆಗಳ ಪದಾಧಿಕಾರಿಗಳ ಭೇಟಿ ನಿರಂತರವಾಗಿ ನಡೆಯುತ್ತಿವೆ. ಜೊತೆಗೆ ಹೋಟೆಲ್, ಢಾಬಾಗಳಲ್ಲಿ ಪಾರ್ಟಿಗಳು ಕೂಡ ಭರ್ಜರಿಯಾಗಿ ನಡೆಯುತ್ತಿವೆ.</p>.<p>‘ಇಷ್ಟೊಂದು ಅಬ್ಬರದಿಂದ ಯಾವ ವರ್ಷವೂ ಕಸಾಪ ಚುನಾವಣೆ ನಡೆದಿರಲಿಲ್ಲ. ಪದಾಧಿಕಾರಿಗಳ ಅವಧಿಯನ್ನು 3 ವರ್ಷದಿಂದ 5 ವರ್ಷಕ್ಕೆ ಹೆಚ್ಚಳ ಮಾಡಿದ್ದೇ ಇದಕ್ಕೆ ಕಾರಣ. ಎಂಎಲ್ಎ ಚುನಾವಣೆಗೆ ನಿಂತವರಂತೆ ಪ್ರಚಾರ ಮಾಡುತ್ತಿದ್ದಾರೆ, ಹಣ ಚೆಲ್ಲುತ್ತಿದ್ದಾರೆ. ಅವರಲ್ಲಿ ಎಷ್ಟು ಜನ ನಿಜವಾದ ಸಾಹಿತಿಗಳು ಎಂಬುದೇ ಅನುಮಾನ’ ಎಂದು ಸಾಹಿತಿ ಜಿ.ಟಿ.ವೀರಪ್ಪ ಹೇಳಿದರು.</p>.<p class="Subhead"><strong>ಸಂಖ್ಯೆ ಬಗ್ಗೆ ಅನುಮಾನ: </strong>ಮಂಡ್ಯ ತಾಲ್ಲೂಕಿನಲ್ಲಿ ಹೆಚ್ಚು ಮತದಾರರು ಇರುವುದಕ್ಕೂ ಅನುಮಾನ ವ್ಯಕ್ತವಾಗಿದೆ. ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಸ್ಪರ್ಧಾಕಾಂಕ್ಷಿಗಳು ಸ್ವಂತ ಹಣ ಪಾವತಿಸಿ ಸಿಕ್ಕಸಿಕ್ಕವರಿಗೆ ಸದಸ್ಯತ್ವ ಕೊಡಿಸಿದ್ದಾರೆ. ಈ ಕಾರಣದಿಂದ ಮತದಾರರ ಸಂಖ್ಯೆ ಹೆಚ್ಚಾಗಿದೆ ಎಂಬ ಆರೋಪವಿದೆ.</p>.<p>‘ಕಬ್ಬು ಕಡಿಯುವವರು, ಕೂಲಿ ಕೆಲಸ ಮಾಡುವವರು, ಅನಕ್ಷರಸ್ಥರಿಗೂ ಸದಸ್ಯತ್ವ ಕೊಡಿಸಲಾಗಿದೆ. ಆ ಮೂಲಕ ಕಸಾಪ ಬೈಲಾ ಉಲ್ಲಂಘನೆ ಮಾಡಲಾಗಿದೆ. ಈ ಕುರಿತು ತನಿಖೆ ನಡೆಸಬೇಕು’ ಎಂದು ಯುವ ಸಾಹಿತಿಯೊಬ್ಬರು ಒತ್ತಾಯಿಸಿದರು.</p>.<p>‘ಕನ್ನಡ ಓದಲು, ಬರೆಯಲು ಗೊತ್ತಿರುವ ಎಲ್ಲರೂ ಕಸಾಪ ಸದಸ್ಯತ್ವ ಪಡೆಯಬಹುದು. ರೈತರು, ಕೂಲಿ ಕಾರ್ಮಿಕರು ಸದಸ್ಯತ್ವ ಪಡೆಯಬಾರದು ಎಂಬ ವಾದದಲ್ಲಿ ಅರ್ಥವಿಲ್ಲ’ ಎಂದು ಜಿಲ್ಲಾ ಘಟಕಕ್ಕೆ 2ನೇ ಬಾರಿ ಸ್ಪರ್ಧಿಸಿರುವ ಹಾಲಿ ಅಧ್ಯಕ್ಷ ರವಿಕುಮಾರ್ ಚಾಮಲಾಪುರ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ಕೇಂದ್ರ ಸ್ಥಾನಕ್ಕೆ ಸ್ಪರ್ಧಿಸಿರುವ ಸಕಲ ಅಭ್ಯರ್ಥಿಗಳು ಸಕ್ಕರೆ ಜಿಲ್ಲೆಯತ್ತ ಚಿತ್ತ ಹರಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ನಂತರ ಮಂಡ್ಯ ಜಿಲ್ಲೆ ಅತಿ ಹೆಚ್ಚು ಮತದಾರರನ್ನು ಹೊಂದಿದ್ದು, ಅಭ್ಯರ್ಥಿಗಳು ಈ ಕಡೆ ಪ್ರಯಾಣ ಬೆಳೆಸುತ್ತಿದ್ದಾರೆ.</p>.<p>ಬೆಂಗಳೂರು ನಗರ ಜಿಲ್ಲೆಯು 27 ವಿಧಾನಸಭಾ ಕ್ಷೇತ್ರ ಹಾಗೂ ಆನೇಕಲ್ ತಾಲ್ಲೂಕು ಸೇರಿ ಒಟ್ಟು 36,389 ಮತದಾರರನ್ನು ಹೊಂದಿದೆ. ಇದು ರಾಜ್ಯದಲ್ಲಿ ಅಧಿಕ. ನಂತರದ ಸ್ಥಾನದಲ್ಲಿರುವ ಮಂಡ್ಯ ಜಿಲ್ಲೆಯಲ್ಲಿ 24,207 ಮತದಾರರಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಅತಿ ಕಡಿಮೆ 1,984 ಮತದಾರರು ಇದ್ದಾರೆ.</p>.<p>ಮಂಡ್ಯ ತಾಲ್ಲೂಕಿನಲ್ಲೇ 11,623 ಮತದಾರರಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಮತದಾರರನ್ನು ಹೊಂದಿದ ತಾಲ್ಲೂಕು ಎನಿಸಿದೆ. ಹೀಗಾಗಿ, ಕಸಾಪ ಕೇಂದ್ರ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ಮಂಡ್ಯಕ್ಕೆ ಹೆಚ್ಚು ಗಮನ ಕೊಡುತ್ತಿದ್ದಾರೆ.</p>.<p>ಕಸಾಪ ಚುನಾವಣೆಗೆ ಸಂಬಂಧಿಸಿದಂತೆ ಸಭೆ, ಸಮಾರಂಭ ಸಾಮಾನ್ಯವಾಗಿವೆ. ಬಹುತೇಕ ಮಂದಿ ಅಭ್ಯರ್ಥಿಗಳು ಈಗಾಗಲೇ ಮಂಡ್ಯಕ್ಕೆ ಬಂದು ಮತಯಾಚನೆ ಮಾಡಿದ್ದಾರೆ. ಸಾಹಿತಿಗಳು, ಹೋರಾಟಗಾರರು, ಸಂಘ ಸಂಸ್ಥೆಗಳ ಪದಾಧಿಕಾರಿಗಳ ಭೇಟಿ ನಿರಂತರವಾಗಿ ನಡೆಯುತ್ತಿವೆ. ಜೊತೆಗೆ ಹೋಟೆಲ್, ಢಾಬಾಗಳಲ್ಲಿ ಪಾರ್ಟಿಗಳು ಕೂಡ ಭರ್ಜರಿಯಾಗಿ ನಡೆಯುತ್ತಿವೆ.</p>.<p>‘ಇಷ್ಟೊಂದು ಅಬ್ಬರದಿಂದ ಯಾವ ವರ್ಷವೂ ಕಸಾಪ ಚುನಾವಣೆ ನಡೆದಿರಲಿಲ್ಲ. ಪದಾಧಿಕಾರಿಗಳ ಅವಧಿಯನ್ನು 3 ವರ್ಷದಿಂದ 5 ವರ್ಷಕ್ಕೆ ಹೆಚ್ಚಳ ಮಾಡಿದ್ದೇ ಇದಕ್ಕೆ ಕಾರಣ. ಎಂಎಲ್ಎ ಚುನಾವಣೆಗೆ ನಿಂತವರಂತೆ ಪ್ರಚಾರ ಮಾಡುತ್ತಿದ್ದಾರೆ, ಹಣ ಚೆಲ್ಲುತ್ತಿದ್ದಾರೆ. ಅವರಲ್ಲಿ ಎಷ್ಟು ಜನ ನಿಜವಾದ ಸಾಹಿತಿಗಳು ಎಂಬುದೇ ಅನುಮಾನ’ ಎಂದು ಸಾಹಿತಿ ಜಿ.ಟಿ.ವೀರಪ್ಪ ಹೇಳಿದರು.</p>.<p class="Subhead"><strong>ಸಂಖ್ಯೆ ಬಗ್ಗೆ ಅನುಮಾನ: </strong>ಮಂಡ್ಯ ತಾಲ್ಲೂಕಿನಲ್ಲಿ ಹೆಚ್ಚು ಮತದಾರರು ಇರುವುದಕ್ಕೂ ಅನುಮಾನ ವ್ಯಕ್ತವಾಗಿದೆ. ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಸ್ಪರ್ಧಾಕಾಂಕ್ಷಿಗಳು ಸ್ವಂತ ಹಣ ಪಾವತಿಸಿ ಸಿಕ್ಕಸಿಕ್ಕವರಿಗೆ ಸದಸ್ಯತ್ವ ಕೊಡಿಸಿದ್ದಾರೆ. ಈ ಕಾರಣದಿಂದ ಮತದಾರರ ಸಂಖ್ಯೆ ಹೆಚ್ಚಾಗಿದೆ ಎಂಬ ಆರೋಪವಿದೆ.</p>.<p>‘ಕಬ್ಬು ಕಡಿಯುವವರು, ಕೂಲಿ ಕೆಲಸ ಮಾಡುವವರು, ಅನಕ್ಷರಸ್ಥರಿಗೂ ಸದಸ್ಯತ್ವ ಕೊಡಿಸಲಾಗಿದೆ. ಆ ಮೂಲಕ ಕಸಾಪ ಬೈಲಾ ಉಲ್ಲಂಘನೆ ಮಾಡಲಾಗಿದೆ. ಈ ಕುರಿತು ತನಿಖೆ ನಡೆಸಬೇಕು’ ಎಂದು ಯುವ ಸಾಹಿತಿಯೊಬ್ಬರು ಒತ್ತಾಯಿಸಿದರು.</p>.<p>‘ಕನ್ನಡ ಓದಲು, ಬರೆಯಲು ಗೊತ್ತಿರುವ ಎಲ್ಲರೂ ಕಸಾಪ ಸದಸ್ಯತ್ವ ಪಡೆಯಬಹುದು. ರೈತರು, ಕೂಲಿ ಕಾರ್ಮಿಕರು ಸದಸ್ಯತ್ವ ಪಡೆಯಬಾರದು ಎಂಬ ವಾದದಲ್ಲಿ ಅರ್ಥವಿಲ್ಲ’ ಎಂದು ಜಿಲ್ಲಾ ಘಟಕಕ್ಕೆ 2ನೇ ಬಾರಿ ಸ್ಪರ್ಧಿಸಿರುವ ಹಾಲಿ ಅಧ್ಯಕ್ಷ ರವಿಕುಮಾರ್ ಚಾಮಲಾಪುರ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>