‘ಹಿರಿಯ ವಿದ್ವಾಂಸರಾದ ಹಂಪನಾ ಅವರನ್ನು ಮಂಡ್ಯದ ಪೊಲೀಸರು ಠಾಣೆಗೆ ಕರೆಸಿಕೊಂಡು ವಿಚಾರಣೆ ನಡೆಸಿರುವುದು ಖಂಡನೀಯ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆದ ಹಲ್ಲೆ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಈ ವಿಚಾರವಾಗಿ ಪರಿಷತ್ತು ಯಾವಾಗಲೂ ಸಾಹಿತಿಗಳ ಪರವಾಗಿಯೇ ನಿಲ್ಲುತ್ತದೆ. ಅವರು ಉತ್ತರ ಭಾರತದಲ್ಲಿ ನಡೆಯುತ್ತಿರುವ ರೈತರ ಚಳವಳಿಯನ್ನು ಪ್ರಸ್ತಾಪಿಸಿ, ಕೇಂದ್ರದ ವಿರುದ್ಧ ಟೀಕೆ ಮಾಡಿ ದ್ದರು. ಯಾರನ್ನೇ ಆಗಲಿ ಟೀಕಿಸುವ ಮತ್ತು ವಿಮರ್ಶಿಸುವ ಅಧಿಕಾರವನ್ನು ಸಂವಿ
ಧಾನವು ನೀಡಿದೆ’ ಎಂದು ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ.