‘ಸರ್ಕಾರದ ವಿವಿಧ ಇಲಾಖೆಗಳು, ಕನ್ನಡಪರ ಸಂಘ-ಸಂಸ್ಥೆಗಳು, ಸಾರ್ವ ಜನಿಕ ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿ, ನಿವೃತ್ತರಾದವರಿಗೆ ಹಾಗೂ ಕನ್ನಡ ಸೇವಾಸಕ್ತರಿಗೆ ಪರಿಷತ್ತಿನಲ್ಲಿ ಕೆಲಸ ನಿರ್ವಹಿಸಲು ಅವಕಾಶವಿದೆ. ಸಾಮಾಜಿಕ ಜಾಲತಾಣ ನಿರ್ವಹಣೆಯ ಜ್ಞಾನವುಳ್ಳ, ಗಣಕಯಂತ್ರ, ಲೆಕ್ಕಪತ್ರಗಳಲ್ಲಿ ಅನುಭವ ಹೊಂದಿದ, ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ತಪ್ಪಿಲ್ಲದೆ ಓದಲು ಹಾಗೂ ಬರೆಯಲು ಬರುವವರಿಗೆ ಆದ್ಯತೆ ನೀಡಲಾಗುತ್ತದೆ.’ ಎಂದು ಹೇಳಿದ್ದಾರೆ.