‘ತಮಿಳುನಾಡು ಹಾಗೂ ಮಹಾರಾಷ್ಟ್ರದಲ್ಲಿ ವಿಶೇಷ ಕಾನೂನು ಜಾರಿಮಾಡಿ, ಅಲ್ಲಿನ ರಾಜ್ಯ ಭಾಷೆಗೆ ಪ್ರಥಮ ಆದ್ಯತೆ ನೀಡಲಾಗಿದೆ. ಇಲ್ಲಿಯೂ ಕನ್ನಡ ಮಾಧ್ಯಮದಲ್ಲಿ ಶಿಕ್ಷಣಕ್ಕೆ ಮುಂದಾಗಬೇಕು. 15 ವರ್ಷಗಳು ಕರ್ನಾಟಕದಲ್ಲಿದ್ದು, ಕನ್ನಡ ಮಾತನಾಡಲು, ಓದಲು ಹಾಗೂ ಬರೆಯಲು ಬರುವವರಿಗೆ ಉದ್ಯೋಗದಲ್ಲಿ ಆದ್ಯತೆ ನೀಡುವ ನಿಯಮವನ್ನು ಜಾರಿ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.