ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಸಾಪ ರಾಜ್ಯ ಘಟಕದ ಅಧ್ಯಕ್ಷ ಮಹೇಶ್ ಜೋಶಿ, ‘ಕುವೆಂಪು ಅವರ ‘ಜಯಭಾರತ ಜನನಿಯ ತನುಜಾತೆ’ ಕವಿತೆಯನ್ನು ‘ನಾಡಗೀತೆ' ಮಾಡಬೇಕೆಂದು ಮೊದಲು ನಿರ್ಧರಿಸಿದ ಕಸಾಪ, 1971ರಲ್ಲಿ ಕುವೆಂಪು ಅವರ ಸಮ್ಮತಿ ಪಡೆದು ತನ್ನ ಎಲ್ಲ ಕಾರ್ಯಕ್ರಮಗಳಲ್ಲೂ ಅದನ್ನು ಹಾಡಿಸುತ್ತಿತ್ತು. 2004ರಲ್ಲಿ ಈ ಸಂಬಂಧ ಕರ್ನಾಟಕ ಸರ್ಕಾರ ನಾಡಗೀತೆಯನ್ನಾಗಿ ನಿಗದಿಪಡಿಸಿ ಆದೇಶ ಹೊರಡಿಸಿತು.