‘ಕಸಾಪವನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವ ಉದ್ದೇಶದಿಂದ ರಾಜ್ಯದ 252 ತಾಲ್ಲೂಕುಗಳಿಗೆ ಭೇಟಿ ನೀಡಿದ್ದೇನೆ. ಜನರ ಆಶಯದಂತೆ ಪರಿಷತ್ತಿನ ಆಜೀವ ಸದಸ್ಯತ್ವ ಶುಲ್ಕವನ್ನು ₹500 ರಿಂದ ₹250ಕ್ಕೆ ಇಳಿಸಲು ನಿರ್ಧರಿಸಿದ್ದೇನೆ. ಆ್ಯಪ್ ಮೂಲಕ ಸದಸ್ಯತ್ವ ನೋಂದಣಿ ಮಾಡಲು ಚಿಂತಿಸಲಾಗಿದೆ. ಈ ಉದ್ದೇಶಗಳ ಈಡೇರಿಕೆಗೆ ಬೈ–ಲಾ ತಿದ್ದುಪಡಿ ಅನಿವಾರ್ಯ. ಕಸಾಪ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಾ.ಚನ್ನಬಸವ ಪಟ್ಟದೇವರ ಜಯಂತಿಯನ್ನು ಎಲ್ಲ ಜಿಲ್ಲೆಗಳಲ್ಲೂ ಆಚರಿಸುವಂತೆ ಆದೇಶಿಸಿದ್ದೇನೆ. ಆ ಮೂಲಕ ಕನ್ನಡಕ್ಕೆ ಅವರು ನೀಡಿದ ಕೊಡುಗೆ ಸ್ಮರಿಸುವ ಕೆಲಸ ಮಾಡಿದ್ದೇನೆ. ಇದನ್ನು ಅರಿಯದೆ ನಾನು ಯಾವ ಕಾರ್ಯಕ್ರಮವನ್ನೂ ಮಾಡಿಲ್ಲ ಎಂದು ಆರೋಪಿಸಿದ್ದೀರಿ. ಇದು ನಿಮಗೆ ಶೋಭೆ ತರುವುದಿಲ್ಲ’ ಎಂದು ಟೀಕಿಸಿದ್ದಾರೆ.