ರಾಜ್ಯದ ಆಡಳಿತದಲ್ಲಿ ಕನ್ನಡ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿದ ಟಿ.ಎಸ್. ನಾಗಾಭರಣ, ಕನ್ನಡಿಗರ ತಾರ್ಕಿಕ ಸಮಸ್ಯೆಗಳಾಗಿ ಉಳಿದಿರುವ ಉದ್ಯೋಗದಲ್ಲಿ ಸ್ಥಳೀಯ ಕನ್ನಡಿಗರಿಗೆ ಆದ್ಯತೆ, ಶಿಕ್ಷಣ ವಲಯದಲ್ಲಿ ಕಡ್ಡಾಯ ಕನ್ನಡ ಕಲಿಕಾ ಅಧಿನಿಯಮದ ಸಂಪೂರ್ಣ ಅನುಷ್ಠಾನ, ತಂತ್ರಜ್ಞಾನದಲ್ಲಿ ಕನ್ನಡ ತಂತ್ರಾಂಶಗಳ ಆವಿಷ್ಕಾರ ಮತ್ತು ಬಳಕೆ ಸೇರಿದಂತೆ ಕನ್ನಡಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು.