ಬಾಲಕೃಷ್ಣ ಆಚಾರ್ ಮತ್ತು ಅವರ ಪತ್ನಿ ವಾಣಿ ಬಿ.ಆಚಾರ್ ಅವರು ಸ್ಥಾಪಿಸಿರುವ ದತ್ತಿನಿಧಿಯಿಂದ ಕೊಡಲಾಗುವ ‘ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ’ಯನ್ನು ಯಕ್ಷಗಾನದ ಅರ್ಥದಾರಿ, ಪ್ರಸಂಗಕರ್ತ ಶ್ರೀಧರ ಡಿ.ಎಸ್ ಅವರಿಗೆ, ಹಿರಿಯ ರಂಗಕರ್ಮಿ ಶ್ರೀಪತಿ ಮಂಜನಬೈಲ್ ಅವರು ಸ್ಥಾಪಿಸಿರುವ ದತ್ತಿನಿಧಿಯಿಂದ ಕೊಡಲಾಗುವ ‘ಮಂಜನಬೈಲ್ ರಂಗ ಸನ್ಮಾನ್’ ಪ್ರಶಸ್ತಿಯನ್ನು ಧಾರವಾಡದ ಹಿರಿಯ ರಂಗಕರ್ಮಿ ಹರ್ಷವರ್ಧನ ಹನುಮಂತರಾವ್ ಡಂಬಳ ಅವರಿಗೆ ನೀಡಲು ನಿರ್ಣಯಿಸಲಾಗಿದೆ.