<p><strong>ಬೆಂಗಳೂರು:</strong> ನದಿ ಕಣಿವೆ ಪ್ರದೇಶಗಳಲ್ಲಿ ರಾಜ್ಯಕ್ಕೆ ಹಂಚಿಕೆಯಾಗಿರುವ ನೀರಿನ ಪಾಲನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವುದಕ್ಕೆ ಪೂರಕವಾಗಿ ಯೋಜನೆಗಳನ್ನು ರೂಪಿಸಬೇಕು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ಸೋಮವಾರ ಜಲ ಸಂಪನ್ಮೂಲ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ರಾಜ್ಯದಲ್ಲಿ 1.4 ಕೋಟಿ ಹೆಕ್ಟೇರ್ ಕೃಷಿ ಯೋಗ್ಯ ಜಮೀನು ಇದೆ. ಈ ಪೈಕಿ 40.66 ಲಕ್ಷ ಹೆಕ್ಟೇರ್ ಪ್ರದೇಶವು ಜಲ ಸಂಪನ್ಮೂಲ ಇಲಾಖೆಯ ಯೋಜಿತ ನೀರಾವರಿ ವಲಯದಲ್ಲಿದೆ. ಈವರೆಗೆ 29.18 ಲಕ್ಷ ಹೆಕ್ಟೇರ್ ಜಮೀನಿಗೆ ಮಾತ್ರ ನೀರಾವರಿ ಒದಗಿಸಲಾಗಿದೆ. ಉಳಿದ ಪ್ರದೇಶಕ್ಕೂ ನೀರಾವರಿ ಸೌಲಭ್ಯ ವಿಸ್ತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಪ್ರಸಕ್ತ ವರ್ಷ ಜಲ ಸಂಪನ್ಮೂಲ ಇಲಾಖೆಗೆ ₹18,702 ಕೋಟಿ ಅನುದಾನ ಒದಗಿಸಲಾಗಿದೆ. ಜುಲೈ ಅಂತ್ಯದವರೆಗೆ ₹ 5,053 ಕೋಟಿ ಬಳಕೆಯಾಗಿದೆ. ಅನುದಾನ ಬಳಕೆಯಲ್ಲಿ ಪೂರ್ಣ ಪ್ರಮಾಣದ ಗುರಿ ಸಾಧಿಸಬೇಕು. ಕಾಮಗಾರಿಗಳಿಗೆ ಅಡ್ಡಿಯಾಗಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸಚಿವರು ತಿಳಿಸಿದರು.</p>.<p>ಜಲ ಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಲಕ್ಷ್ಮಣರಾವ್ ಪೇಶ್ವೆ, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ, ಪ್ರಧಾನ ಎಂಜಿನಿಯರ್ ಸಿದ್ದಗಂಗಪ್ಪ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನದಿ ಕಣಿವೆ ಪ್ರದೇಶಗಳಲ್ಲಿ ರಾಜ್ಯಕ್ಕೆ ಹಂಚಿಕೆಯಾಗಿರುವ ನೀರಿನ ಪಾಲನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವುದಕ್ಕೆ ಪೂರಕವಾಗಿ ಯೋಜನೆಗಳನ್ನು ರೂಪಿಸಬೇಕು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ಸೋಮವಾರ ಜಲ ಸಂಪನ್ಮೂಲ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ರಾಜ್ಯದಲ್ಲಿ 1.4 ಕೋಟಿ ಹೆಕ್ಟೇರ್ ಕೃಷಿ ಯೋಗ್ಯ ಜಮೀನು ಇದೆ. ಈ ಪೈಕಿ 40.66 ಲಕ್ಷ ಹೆಕ್ಟೇರ್ ಪ್ರದೇಶವು ಜಲ ಸಂಪನ್ಮೂಲ ಇಲಾಖೆಯ ಯೋಜಿತ ನೀರಾವರಿ ವಲಯದಲ್ಲಿದೆ. ಈವರೆಗೆ 29.18 ಲಕ್ಷ ಹೆಕ್ಟೇರ್ ಜಮೀನಿಗೆ ಮಾತ್ರ ನೀರಾವರಿ ಒದಗಿಸಲಾಗಿದೆ. ಉಳಿದ ಪ್ರದೇಶಕ್ಕೂ ನೀರಾವರಿ ಸೌಲಭ್ಯ ವಿಸ್ತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಪ್ರಸಕ್ತ ವರ್ಷ ಜಲ ಸಂಪನ್ಮೂಲ ಇಲಾಖೆಗೆ ₹18,702 ಕೋಟಿ ಅನುದಾನ ಒದಗಿಸಲಾಗಿದೆ. ಜುಲೈ ಅಂತ್ಯದವರೆಗೆ ₹ 5,053 ಕೋಟಿ ಬಳಕೆಯಾಗಿದೆ. ಅನುದಾನ ಬಳಕೆಯಲ್ಲಿ ಪೂರ್ಣ ಪ್ರಮಾಣದ ಗುರಿ ಸಾಧಿಸಬೇಕು. ಕಾಮಗಾರಿಗಳಿಗೆ ಅಡ್ಡಿಯಾಗಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸಚಿವರು ತಿಳಿಸಿದರು.</p>.<p>ಜಲ ಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಲಕ್ಷ್ಮಣರಾವ್ ಪೇಶ್ವೆ, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ, ಪ್ರಧಾನ ಎಂಜಿನಿಯರ್ ಸಿದ್ದಗಂಗಪ್ಪ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>