ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಕಳದಲ್ಲಿ ಶಾಲಾ ಪ್ರವಾಸದ ಬಸ್‌ ಪಲ್ಟಿ: 20 ಮಕ್ಕಳಿಗೆ ಗಾಯ

Last Updated 2 ಜನವರಿ 2023, 15:17 IST
ಅಕ್ಷರ ಗಾತ್ರ

ಕಾರ್ಕಳ (ಉಡುಪಿ ಜಿಲ್ಲೆ): ನಲ್ಲೂರು ಗ್ರಾಮದ ಪಾಜಿಗುಡ್ಡೆ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ಶಾಲಾ ಪ್ರವಾಸದ ಬಸ್‌ ಅಪಘಾತಕ್ಕೀಡಾಗಿದ್ದು 20 ಮಕ್ಕಳಿಗೆ ಹಾಗೂ ಮೂವರು ಶಿಕ್ಷಕರಿಗೆ ಗಾಯಗಳಾಗಿವೆ.

ಬೆಳ್ತಂಗಡಿ ಕಡೆಯಿಂದ ಕಾರ್ಕಳದ ಕಡೆಗೆ ಬಸ್‌ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಉರುಳಿ ಬಿದ್ದಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ರಾಂಪುರ ಗ್ರಾಮದ ಬಸವೇಶ್ವರ ಪ್ರೌಢಶಾಲೆಯ 60 ಮಕ್ಕಳು ಬಸ್‌ನಲ್ಲಿ ಪ್ರವಾಸಕ್ಕೆ ಬಂದಿದ್ದರು. ಧರ್ಮಸ್ಥಳ ನೋಡಿಕೊಂಡು ಉಡುಪಿಗೆ ಬರುವಾಗ ಅಪಘಾತ ಸಂಭವಿಸಿದೆ.

ಗಾಯಗೊಂಡ ಮಕ್ಕಳು ಮತ್ತು ಶಿಕ್ಷಕರಿಗೆ ಕಾರ್ಕಳದ ತಾಲ್ಲೂಕು ಸರ್ಕರಿ ಆಸ್ಪತ್ರೆ ಹಾಗೂ ಬಜಗೋಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT