ಬೆಂಗಳೂರು: ಮಾರ್ಚ್ 9ರಿಂದ 29ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಕೆಎಸ್ಆರ್ಟಿಸಿ ಅವಕಾಶ ಕಲ್ಪಿಸಿದೆ.
ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಸಾಮಾನ್ಯ ಮತ್ತು ವೇಗದೂತ ಬಸ್ಗಳಲ್ಲಿ ಪ್ರಯಾಣ ಮಾಡಬಹುದು. ಈ ಕುರಿತು ಚಾಲನಾ ಸಿಬ್ಬಂದಿಗೂ ತಿಳಿವಳಿಕೆ ನೀಡಲಾಗಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.