ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಭ್ರಷ್ಟಾಚಾರವೇ ನಡೆದಿಲ್ಲ ಎಂದು ಬೊಬ್ಬಿರಿಯುವ @BJP4Karnataka ನಾಯಕರಿಗೆ ತಮ್ಮ ಪ್ರಾಮಾಣಿಕತೆ ಬಗ್ಗೆ ಅಷ್ಟೊಂದು ವಿಶ್ವಾಸವಿದ್ದರೆ 40% ಕಮಿಷನ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ, ತಮ್ಮ ಮೇಲಿರುವ ಆರೋಪದಿಂದ ಮುಕ್ತಿ ಹೊಂದಲಿ. 1/8#40PercentGovt
ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಬರೆದ ಪತ್ರವನ್ನು ನೋಡಿದ್ದು ಬಿಟ್ಟರೆ ಅವರ ಭೇಟಿ ಸಾಧ್ಯವಾಗಿರಲಿಲ್ಲ. ಒಮ್ಮೆ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಹಾಗೂ ಅರಣ್ಯ ಗುತ್ತಿಗೆದಾರರ ಸಂಘದವರು ಬಂದು ಭೇಟಿಮಾಡಿ ಸಮಾಲೋಚನೆ ನಡೆಸಿ, ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದರು. 3/8#40PercentGovt
ಟೆಂಡರ್ ಅನುಮೋದನೆಗೆ ಮೊದಲೇ 30 ರಿಂದ 40% ಲಂಚ ಕೊಡಬೇಕಾಗಿದೆ. ಪ್ರಧಾನಿಗಳಿಗೆ ಪತ್ರ ಬರೆದು ಒಂದು ವರ್ಷ ಆದರೂ ಅವರು ಯಾವ ಕ್ರಮ ಕೈಗೊಂಡಿಲ್ಲ. ನ್ಯಾಯಾಂಗ ತನಿಖೆಗೆ @BJP4Karnataka ಸರ್ಕಾರವನ್ನು ಒತ್ತಾಯಿಸಿ ಎಂದು ಇಂದು ಕೆಂಪಣ್ಣನವರು ನನ್ನ ಬಳಿ ಕೇಳಿಕೊಂಡಿದ್ದಾರೆ. 5/8#40PercentGovt
ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಾವು ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಡ ಹಾಕುತ್ತೇವೆ. ಭಂಡ @BJP4Karnataka ನಮ್ಮ ಮಾತಿಗೆ ಕಿವಿಗೊಡದೆ ಹೋದರೆ ಈ ವಿಚಾರವನ್ನು ರಾಜ್ಯದ ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ. ನಾಡಿನ ಪ್ರಜ್ಞಾವಂತ ಜನ ಈ ಬಗ್ಗೆ ಸಂದರ್ಭ ಬಂದಾಗ ಸೂಕ್ತ ತೀರ್ಪು ನೀಡುತ್ತಾರೆಂಬ ನಂಬಿಕೆ ನನಗಿದೆ. 8/8#40PercentGovt