<p><strong>ಬೆಂಗಳೂರು</strong>: ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಈ ಹಿಂದೆ ನೀಡುತ್ತಿದ್ದ ಸಬ್ಸಿಡಿಯನ್ನು ಅದೇ ಮಾದರಿಯಲ್ಲಿ ಮುಂದುವರೆಸುತ್ತಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.</p>.<p>ವಿಕಾಸಸೌಧದದಲ್ಲಿ ಜಿಲ್ಲಾ ಕೃಷಿ ಅಧಿಕಾರಿಗಳ ಜೊತೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಪ್ರಗತಿ ಕುರಿತು ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಈ ಹಿಂದೆ ಎಲ್ಲಾ ವರ್ಗದ 2 ಹೆಕ್ಟೇರ್ ಭೂಮಿಯುಳ್ಳ ರೈತರಿಗೆ ಶೇ 90 ರಷ್ಟು, 5 ಹೆಕ್ಟೇರ್ ಭೂಮಿಯುಳ್ಳ ರೈತರಿಗೆ ಶೇ 45 ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು. ಮುಖ್ಯಮಂತ್ರಿ ಆದೇಶದ ಮೇರೆಗೆ ಇದೀಗ ಮತ್ತೆ ಅದೇ ಹಳೆಯ ಮಾದರಿಯ ಸಬ್ಸಿಡಿಯನ್ನು ಮುಂದುವರೆಸಲಾಗುವುದು, 5 ಹೆಕ್ಟೇರ್ ಮೇಲ್ಪಟ್ಟ ಯಾವುದೇ ರೈತರಿಗೆ ಸಬ್ಸಿಡಿ ಇರುವುದಿಲ್ಲ ಎಂದರು.</p>.<p><strong>ಆರ್.ಟಿ.ಸಿ ಪಹಣಿಯಲ್ಲಿ ಬೆಳೆ ಸಮೀಕ್ಷೆ ವಿವರ ನಮೂದು: </strong>ಕಳೆದ ಬಾರಿ ರೈತರಿಂದಲೇ ಬೆಳೆ ಸಮೀಕ್ಷೆಯನ್ನು ನಡೆಸುವ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯಶಸ್ವಿಯಾಗಿದ್ದು, ಕೇಂದ್ರದಿಂದ ಮೆಚ್ಚುಗೆಯನ್ನು ಪಡೆದಿದೆ. ಅಲ್ಲದೇ, ಕರ್ನಾಟಕ ‘ಅಗ್ರಿ ಟ್ರೆಂಡ್ ಸೆಕ್ಟರ್’ ಎನ್ನುವ ಕೇಂದ್ರದ ಶ್ಲಾಘನೆಗೂ ಪಾತ್ರವಾಗಿ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಈ ವರ್ಷವೂ ಸಹ ರೈತನೇ ತನ್ನ ಬೆಳೆಗೆ ತಾನೇ ಸಮೀಕ್ಷೆ ನಡೆಸಿ ತಾನೇ ‘ನನ್ನ ಬೆಳೆ ನನ್ನ ಹಕ್ಕು’ ಎಂದು ಪ್ರಮಾಣಪತ್ರ ನೀಡುವ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆಗೆ ಚಾಲನೆ ನೀಡಲಾಗಿದೆ. ಈ ವರ್ಷವೂ ಸಹ ಮುಂಗಾರು ಹಂಗಾಮಿನಲ್ಲಿ ಸುಮಾರು 2.10 ಕೋಟಿ ತಾಕುಗಳಲ್ಲಿ ಬೆಳೆ ಸಮೀಕ್ಷೆ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.</p>.<p>ರೈತರೇ ಕಳೆದ ಬಾರಿಯಂತೆ ಈ ಬಾರಿಯೂ ಸಹ ತಮ್ಮ ಬೆಳೆ ಸಮೀಕ್ಷೆಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸುವಂತೆ ಅವರು ಮನವಿ ಮಾಡಿದರು.</p>.<p>2021-22 ನೇ ಸಾಲಿನಲ್ಲಿ ಪೂರ್ವ ಮುಂಗಾರಿನಲ್ಲಿ ಇಲ್ಲಿಯವರೆಗೆ 1.09 ಲಕ್ಷ ತಾಕುಗಳನ್ನು ರೈತರೇ ಸ್ವತಃ ಆ್ಯಪ್ ನಲ್ಲಿ ಹಾಗೂ 28.96 ಲಕ್ಷ ತಾಕುಗಳನ್ನು ಖಾಸಗಿ ನಿವಾಸಿಗಳ ಮೂಲಕ ಆ್ಯಪ್ ನಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ವರ್ಷದಿಂದ ರೈತರ ಬೆಳೆ ಸಮೀಕ್ಷೆ ಮಾಹಿತಿಯನ್ನು ಇನ್ನು ಮುಂದೆ ರೈತರ ಆರ್.ಟಿ.ಸಿ. ಪಹಣಿಯಲ್ಲಿ ಸಹ ನಮೂದಾಗಲಿದೆ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/bs-yediyurappa-to-had-visited-delhi-for-meet-pm-narendra-modi-and-amit-shah-cabinet-reshuffle-bjp-848656.html" target="_blank">ದೆಹಲಿಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ: ಸಂಜೆ ಪ್ರಧಾನಿ ಮೋದಿ ಭೇಟಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಈ ಹಿಂದೆ ನೀಡುತ್ತಿದ್ದ ಸಬ್ಸಿಡಿಯನ್ನು ಅದೇ ಮಾದರಿಯಲ್ಲಿ ಮುಂದುವರೆಸುತ್ತಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.</p>.<p>ವಿಕಾಸಸೌಧದದಲ್ಲಿ ಜಿಲ್ಲಾ ಕೃಷಿ ಅಧಿಕಾರಿಗಳ ಜೊತೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಪ್ರಗತಿ ಕುರಿತು ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಈ ಹಿಂದೆ ಎಲ್ಲಾ ವರ್ಗದ 2 ಹೆಕ್ಟೇರ್ ಭೂಮಿಯುಳ್ಳ ರೈತರಿಗೆ ಶೇ 90 ರಷ್ಟು, 5 ಹೆಕ್ಟೇರ್ ಭೂಮಿಯುಳ್ಳ ರೈತರಿಗೆ ಶೇ 45 ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು. ಮುಖ್ಯಮಂತ್ರಿ ಆದೇಶದ ಮೇರೆಗೆ ಇದೀಗ ಮತ್ತೆ ಅದೇ ಹಳೆಯ ಮಾದರಿಯ ಸಬ್ಸಿಡಿಯನ್ನು ಮುಂದುವರೆಸಲಾಗುವುದು, 5 ಹೆಕ್ಟೇರ್ ಮೇಲ್ಪಟ್ಟ ಯಾವುದೇ ರೈತರಿಗೆ ಸಬ್ಸಿಡಿ ಇರುವುದಿಲ್ಲ ಎಂದರು.</p>.<p><strong>ಆರ್.ಟಿ.ಸಿ ಪಹಣಿಯಲ್ಲಿ ಬೆಳೆ ಸಮೀಕ್ಷೆ ವಿವರ ನಮೂದು: </strong>ಕಳೆದ ಬಾರಿ ರೈತರಿಂದಲೇ ಬೆಳೆ ಸಮೀಕ್ಷೆಯನ್ನು ನಡೆಸುವ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯಶಸ್ವಿಯಾಗಿದ್ದು, ಕೇಂದ್ರದಿಂದ ಮೆಚ್ಚುಗೆಯನ್ನು ಪಡೆದಿದೆ. ಅಲ್ಲದೇ, ಕರ್ನಾಟಕ ‘ಅಗ್ರಿ ಟ್ರೆಂಡ್ ಸೆಕ್ಟರ್’ ಎನ್ನುವ ಕೇಂದ್ರದ ಶ್ಲಾಘನೆಗೂ ಪಾತ್ರವಾಗಿ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಈ ವರ್ಷವೂ ಸಹ ರೈತನೇ ತನ್ನ ಬೆಳೆಗೆ ತಾನೇ ಸಮೀಕ್ಷೆ ನಡೆಸಿ ತಾನೇ ‘ನನ್ನ ಬೆಳೆ ನನ್ನ ಹಕ್ಕು’ ಎಂದು ಪ್ರಮಾಣಪತ್ರ ನೀಡುವ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆಗೆ ಚಾಲನೆ ನೀಡಲಾಗಿದೆ. ಈ ವರ್ಷವೂ ಸಹ ಮುಂಗಾರು ಹಂಗಾಮಿನಲ್ಲಿ ಸುಮಾರು 2.10 ಕೋಟಿ ತಾಕುಗಳಲ್ಲಿ ಬೆಳೆ ಸಮೀಕ್ಷೆ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.</p>.<p>ರೈತರೇ ಕಳೆದ ಬಾರಿಯಂತೆ ಈ ಬಾರಿಯೂ ಸಹ ತಮ್ಮ ಬೆಳೆ ಸಮೀಕ್ಷೆಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸುವಂತೆ ಅವರು ಮನವಿ ಮಾಡಿದರು.</p>.<p>2021-22 ನೇ ಸಾಲಿನಲ್ಲಿ ಪೂರ್ವ ಮುಂಗಾರಿನಲ್ಲಿ ಇಲ್ಲಿಯವರೆಗೆ 1.09 ಲಕ್ಷ ತಾಕುಗಳನ್ನು ರೈತರೇ ಸ್ವತಃ ಆ್ಯಪ್ ನಲ್ಲಿ ಹಾಗೂ 28.96 ಲಕ್ಷ ತಾಕುಗಳನ್ನು ಖಾಸಗಿ ನಿವಾಸಿಗಳ ಮೂಲಕ ಆ್ಯಪ್ ನಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ವರ್ಷದಿಂದ ರೈತರ ಬೆಳೆ ಸಮೀಕ್ಷೆ ಮಾಹಿತಿಯನ್ನು ಇನ್ನು ಮುಂದೆ ರೈತರ ಆರ್.ಟಿ.ಸಿ. ಪಹಣಿಯಲ್ಲಿ ಸಹ ನಮೂದಾಗಲಿದೆ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/bs-yediyurappa-to-had-visited-delhi-for-meet-pm-narendra-modi-and-amit-shah-cabinet-reshuffle-bjp-848656.html" target="_blank">ದೆಹಲಿಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ: ಸಂಜೆ ಪ್ರಧಾನಿ ಮೋದಿ ಭೇಟಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>