ಆರ್.ಟಿ.ಸಿ ಪಹಣಿಯಲ್ಲಿ ಬೆಳೆ ಸಮೀಕ್ಷೆ ವಿವರ ನಮೂದು: ಕಳೆದ ಬಾರಿ ರೈತರಿಂದಲೇ ಬೆಳೆ ಸಮೀಕ್ಷೆಯನ್ನು ನಡೆಸುವ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯಶಸ್ವಿಯಾಗಿದ್ದು, ಕೇಂದ್ರದಿಂದ ಮೆಚ್ಚುಗೆಯನ್ನು ಪಡೆದಿದೆ. ಅಲ್ಲದೇ, ಕರ್ನಾಟಕ ‘ಅಗ್ರಿ ಟ್ರೆಂಡ್ ಸೆಕ್ಟರ್’ ಎನ್ನುವ ಕೇಂದ್ರದ ಶ್ಲಾಘನೆಗೂ ಪಾತ್ರವಾಗಿ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಈ ವರ್ಷವೂ ಸಹ ರೈತನೇ ತನ್ನ ಬೆಳೆಗೆ ತಾನೇ ಸಮೀಕ್ಷೆ ನಡೆಸಿ ತಾನೇ ‘ನನ್ನ ಬೆಳೆ ನನ್ನ ಹಕ್ಕು’ ಎಂದು ಪ್ರಮಾಣಪತ್ರ ನೀಡುವ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆಗೆ ಚಾಲನೆ ನೀಡಲಾಗಿದೆ. ಈ ವರ್ಷವೂ ಸಹ ಮುಂಗಾರು ಹಂಗಾಮಿನಲ್ಲಿ ಸುಮಾರು 2.10 ಕೋಟಿ ತಾಕುಗಳಲ್ಲಿ ಬೆಳೆ ಸಮೀಕ್ಷೆ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.