‘ನಿಗಮಕ್ಕೆ ₹ 21 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಒಟ್ಟು 2,013 ಫಲಾನುಭವಿಗಳಿಗೆ ಸಾಲ ನೀಡಿ ಶೇ 100ರಷ್ಟು ಪ್ರಗತಿ ಸಾಧಿಸಲಾಗಿದೆ. ಈ ನಿಗಮದಲ್ಲಿ ಮಾತ್ರ ಸಾಲ ನೀಡಿದ ಹಣ ವಾಪಸು ಬರುತ್ತಿದೆ. ಇತರ ನಿಗಮಮಗಳೂ ಇದೇ ರೀತಿ ಆಗಬೇಕು. ನಿಗಮದಲ್ಲಿ ಎಲ್ಲ ಸೇವೆಗಳನ್ನು ಆನ್ಲೈನ್ ಮೂಲಕ ನೀಡಲಾಗುತ್ತಿದೆ. ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ₹10 ಕೋಟಿ ಹೆಚ್ಚುವರಿ ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಬೇಡಿಕೆ ಸಲ್ಲಿಸಲಾಗಿದೆ’ ಎಂದು ಸಚಿವರು ವಿವರಿಸಿದರು.